ಕೊಡಗು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ: ಮುಖ್ಯಮಂತ್ರಿಗೆ ಸುದೀಪ್ ಮನವಿ

ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಎಂದು ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಹೇಳಿದ್ದಾರೆ.
ಸುದೀಪ್
ಸುದೀಪ್
ಬೆಂಗಳೂರು: ಪ್ರಾಕೃತಿಕ ವೈವಿಧ್ಯಮಯ ತಾಣವಾದ  ಉತ್ತರ ಕನ್ನಡ  ಹಾಗೂ ಕೊಡಗು ಜಿಲ್ಲೆಗಳಲ್ಲಿ  ಗಂಭೀರ ಸ್ವರೂಪದ ಕಾಯಿಲೆಗಳು ಹಾಗೂ ಅಪಘಾತಗಳ ಸಂದರ್ಭದಲ್ಲಿ ತಕ್ಷ ಣದ ಚಿಕಿತ್ಸೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ ಮಾಡಬೇಕು ಎಂಬ ಆಗ್ರಹದ ಅಭಿಯಾನ ಇದೀಗ ಪ್ರಾರಂಭಗೊಂಡಿದೆ. 
ಸಾಮಾಜಿಕ ಜಾಲತಾಣಗಳಲ್ಲಿ ಪ್ರಾರಂಭವಾಗಿರುವ ಈ ಅಭಿಯಾನ ದಿನದಿಂದ ದಿನಕ್ಕೆ ವ್ಯಾಪಕತೆಯನ್ನು ಪಡೆದುಕೊಳ್ಳುತ್ತಿದೆ. ನೆಟ್ಟಿಗರು ಫೇಸ್ ಬುಕ್, ಟ್ವಿಟರ್, ವಾಟ್ಸಾಪ್ ಗಳನ್ನು ಬಳಕೆ ಮಾಡಿಕೊಳ್ಳುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸುತ್ತಿದ್ದಾರೆ.
ಈ ಅಭಿಯಾನಕ್ಕೆ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್, ರವಿಚಂದ್ರನ್ , ಪುನೀತ್ ರಾಜ್ ಕುಮಾರ್, ರಶ್ಮಿಕಾ ಮಂದಣ್ಣ , ಹರ್ಷಿಕಾ ಪೂಣಚ್ಚ ಹೀಗೆ ಹಲವಾರು ಸ್ಯಾಂಡಲ್ ವುಡಿನ ನಟ, ನಟಿಯರು ಬೆಂಬಲ ವ್ಯಕ್ತಪಡಿಸಿದ್ದರು. 
ಇದೀಗ ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಕೂಡಾ ಈ ಅಭಿಯಾನಕ್ಕೆ ಕೈ ಜೋಡಿಸಿದ್ದು, ಕೊಡಗು,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ. ಈ ವಿಚಾರದ ಬಗ್ಗೆ ಮುಖ್ಯಮಂತ್ರಿಗಳು ಗಮನ ಹರಿಸಿ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com