ಸ್ಮಾರಕ ನಿರ್ಮಾಣಕ್ಕೆ ಸರ್ಕಾರ 2017ರಲ್ಲಿ ಹಾಲಾಳು ಗ್ರಾಮದ ಮೈಸೂರು- ಮಾನಂದವಾಡಿ ರಸ್ತೆಯಲ್ಲಿ 5 ಎಕರೆ ಭೂಮಿ ಗುರುತಿಸಿತ್ತು.. ಈ ಸಂಬಂಧ ಸರ್ಕಾರದ ನಿರ್ಧಾರ ಪ್ರಶ್ನಿಸಿ ರೈತರು ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಸ್ಥಳೀಯ ನ್ಯಾಯಾಲಯ ತಡೆ ಯಾಜ್ಞೆ ನೀಡಿತ್ತು. ಕೋರ್ಟ್ನಿಂದ ತಡೆಯಾಜ್ಞೆ ತಂದವರು ನಾಲ್ಕು ಬಾರಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಹೈಕೋರ್ಟ್, ತಡೆಯಾಜ್ಞೆ ತೆರವುಗೊಳಿಸಿ ಸ್ಮಾರಕ ನಿರ್ಮಾಣಕ್ಕೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಜೂನ್ 1 ರಂದು ಸ್ಮಾರಕ ನಿರ್ಮಾಣ ಕಾರ್ಯ ಆರಂಭವಾಗಿತ್ತು.