ನಟ ಸುದೀಪ್ ನಿರ್ಮಾಣದ ವಾರಸ್ದಾರ ಧಾರಾವಾಹಿ ಚಿತ್ರೀಕರಣಕ್ಕೆ ದೀಪಕ್ ಮಯೂರ್ ಎನ್ನುವವರು ಮನೆ, ತೋಟ ಬಾಡಿಗೆ ನೀಡಿದ್ದರು. ಧಾರಾವಾಹಿ ಶೂಟಿಂಗ್ ಸಂದರ್ಭದಲ್ಲಿ ಕಾಫಿ ತೋಟಕ್ಕೆ ಸಾಕಷ್ಟು ಹಾನಿಯಾಗಿದ್ದು, ಹಾನಿಯಾದ ಹಿನ್ನೆಲೆಯಲ್ಲಿ ಒಟ್ಟು 1.50 ಕೋಟಿ ರೂ. ನಷ್ಟವಾಗಿದೆ. ಈ ಹಣವನ್ನು ನೀಡಬೇಕೆಂದು ಧಾರಾವಾಹಿ ನಿರ್ಮಾಣ ತಂಡಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಈ ಬೇಡಿಕೆಯನ್ನು ಸುದೀಪ್ ಕ್ರಿಯೇಶನ್ಸ್ ತಿರಸ್ಕರಿಸಿತ್ತು.