''ಇದು ಕೇವಲ ತೋರ್ಪಡಿಕೆಗಾಗಿ ಶುಭ ಕೋರುತ್ತಿದ್ದೇನೆ ಎಂದು ತಿಳಿದುಕೊಳ್ಳುವವರಿಗೆ ನಾನು ಏನು ಹೇಳಲು ಬಯಸುತ್ತಿದ್ದೇನೆಂದರೆ, ನಾನು ಮಾನವೀಯ ಸಂಬಂಧಗಳಿಗೆ ಬೆಲೆ ಕೊಡುತ್ತೇನೆ. ಇದನ್ನೇ ನಾನು ಚುನಾವಣಾ ಪ್ರಚಾರದ ಸಮಯದಲ್ಲಿಯೂ ಒತ್ತಿ ಹೇಳುತ್ತಿದ್ದೆ. ಸುಮಕ್ಕ ಮಂಡ್ಯದಲ್ಲಿ ಗೆದ್ದಿದಕ್ಕೆ ಶುಭ ಕೋರುತ್ತೇನೆ. ಯಾರನ್ನು ಟೀಕಿಸುವುದು ಬೇಡ, ಮಂಡ್ಯದ ಅಭಿವೃದ್ದಿಗಾಗಿ ನಾನು ಯಾರ ಜೊತೆಗಾದರೂ ಕೈ ಜೋಡಿಸಲು ಸಿದ್ಧ. ಈ ಚುನಾವಣೆಯ ಫಲಿತಾಂಶದ ಹೊಣೆಯನ್ನು ನಾನೇ ಹೊರುತ್ತೇನೆ. ಏನೇ ಟೀಕಿಸುವುದು ಇದ್ದರೂ ನನ್ನನ್ನೇ ಟೀಕಿಸಿ. ಎಮ್ ಎಲ್ ಎ, ಎಮ್ ಎಲ್ ಸಿ, ಕಾರ್ಯಕರ್ತರು, ಮುಖ್ಯಮಂತ್ರಿ ಹಾಗೂ ದೇವೇಗೌಡರನ್ನು ಟೀಕಿಸುವುದು ಬೇಡ ಎಂದು ಮನವಿ ಮಾಡಿದ್ದಾರೆ.