ರಿಮೇಕ್ ಅಲ್ಲ ಸ್ವಮೇಕ್: ಮತ್ತೆ ನಿರ್ದೇಶನಕ್ಕಿಳಿದ ಸುದೀಪ್ ಸ್ಪಷ್ಟನೆ

ಸ್ಯಾಂಡಲ್​ವುಡ್ ಬಾದ್​ಷಾ ಕಿಚ್ಚ ಸುದೀಪ್ ಮತ್ತೆ ನಿರ್ದೇಶನಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳಿಂದ ಜೋರಾಗಿ ಕೇಳಿ ಬರುತ್ತಿತ್ತು. ಅದು ಯಾವ ಸಿನಿಮಾ, ರಿಮೇಕಾ ಇಲ್ಲ ಸ್ವಮೇಕಾ ಎಂಬ ಪ್ರಶ್ನೆಗಳು ಸಹ ಅಭಿನಯ ಚಕ್ರವರ್ತಿ ಅಭಿಮಾನಿಗಳಲ್ಲಿತ್ತು.
ಸುದೀಪ್
ಸುದೀಪ್

ಬೆಂಗಳೂರು: ಸ್ಯಾಂಡಲ್​ವುಡ್ ಬಾದ್​ಷಾ ಕಿಚ್ಚ ಸುದೀಪ್ ಮತ್ತೆ ನಿರ್ದೇಶನಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳಿಂದ ಜೋರಾಗಿ ಕೇಳಿ ಬರುತ್ತಿತ್ತು. ಅದು ಯಾವ ಸಿನಿಮಾ, ರಿಮೇಕಾ ಇಲ್ಲ ಸ್ವಮೇಕಾ ಎಂಬ ಪ್ರಶ್ನೆಗಳು ಸಹ ಅಭಿನಯ ಚಕ್ರವರ್ತಿ ಅಭಿಮಾನಿಗಳಲ್ಲಿತ್ತು. ಈ ಕುತೂಹಲಕಾರಿ ಪ್ರಶ್ನೆಗೆ ಖುದ್ದು ಕಿಚ್ಚ ಸುದೀಪ್ ಅವರೇ ಉತ್ತರಿಸಿದ್ದಾರೆ.

'ಮೈ ಆಟೋಗ್ರಾಫ್' ಸಿನಿಮಾ ಮೂಲಕ ನಿರ್ದೇಶಕರಾಗಿ ಭಡ್ತಿ ಪಡೆದ ಸುದೀಪ್ ನಟನೆಗೆ ಮಾತ್ರವಲ್ಲ ಆ್ಯಕ್ಷನ್ ಕಟ್​ಗೂ ಸೈ ಎಂದು ಮೊದಲ ಚಿತ್ರದಲ್ಲೇ ನಿರೂಪಿಸಿದ್ದರು. ಆ ಬಳಿಕ ನೋವು ನಲಿವಿನ ಕಥೆ ಹೇಳಿದ್ದ '73 ಶಾಂತಿ ನಿವಾಸ', ಮಾಸ್ ಪ್ರೇಕ್ಷಕರಿಗಾಗಿ 'ವೀರ ಮದಕರಿ', ಕೆಂಪೇಗೌಡ, ಯುವಪ್ರೇಮಿಗಳಿಗಾಗಿ ಜಸ್ಟ್ ಮಾತ್ ಮಾತಲ್ಲಿ' ಚಿತ್ರ ನಿರ್ದೇಶಿಸಿ ಸುದೀಪ್ ಮೋಡಿ ಮಾಡಿದ್ದರು.

ಅದರಲ್ಲೂ 2014ರಲ್ಲಿ 'ಮಾಣಿಕ್ಯ' ಚಿತ್ರವನ್ನು ನಟನೆಯೊಂದಿಗೆ ನಿರ್ದೇಶಿಸಿ ಬಾಕ್ಸಾಫೀಸ್​ನ್ನು ಕೊಳ್ಳೆ ಹೊಡೆದಿದ್ದರು. ಇದೀಗ ಐದು ವರ್ಷಗಳ ಬಳಿಕ ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಡಲು 'ಪೈಲ್ವಾನ್' ರೆಡಿಯಾಗುತ್ತಿದ್ದಾರೆ. 

'ನಾನು ನಿರ್ದೇಶಿಸುತ್ತಿರುವುದು ಒರಿಜಿನಲ್ ಸ್ಕ್ರಿಪ್ಟ್​. ಈ ಚಿತ್ರದ ಕಥೆಗಾಗಿ ನಮ್ಮ ತಂಡದ ಸದಸ್ಯರು ಈಗಾಗಲೇ ತೊಡಗಿಸಿಕೊಂಡಿದ್ದಾರೆ. ಆ ಕಥೆಯ ಬಗ್ಗೆ ನಾನು ಕೂಡ ಉತ್ಸುಕನಾಗಿದ್ದೇನೆ. ಶೀಘ್ರದಲ್ಲೇ ಈ ಸಿನಿಮಾ ಸೆಟ್ಟೇರಲಿದೆ' ಎಂದು ಸ್ಯಾಂಡಲ್​ವುಡ್ ಬಿಗ್ ಬಾಸ್ ಸುದೀಪ್ ತಿಳಿಸಿದ್ದಾರೆ.ಅಲ್ಲಿಗೆ ಕಳೆದ ಕೆಲ ದಿನಗಳಿಂದ ಕೇಳಿ ಬರುತ್ತಿದ್ದ ರಿಮೇಕಾ, ಸ್ವಮೇಕಾ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಂತಾಗಿದೆ. ಸದ್ಯ ಸುದೀಪ್ ಶಿವ ಕಾರ್ತಿಕ್ ನಿರ್ದೇಶನದ ಕೋಟಿಗೊಬ್ಬ-3 ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com