ಮೈಸೂರು: ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ನಿರ್ಮಿಸುತ್ತಿರುವ ‘ಭೈರಾದೇವಿ’ ಚಿತ್ರದ ಹಾಡನ್ನು ಮೈಸೂರು ಯುವ ದಸರಾದಲ್ಲಿ ಬಿಡುಗಡೆಗೊಳಿಸಲಾಗಿದೆ.
ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀಜೈ ರಚನೆಯ ‘ಬಂದಾಳಮ್ಮ ಕಾಳಿಕಾ‘ ಹಾಡು ಬಿಡುಗಡೆಯಾಗಿದ್ದು, ಮಾಲತಿ ಲಕ್ಷ್ಮಣ್ ಈ ಹಾಡಿಗೆ ದನಿಯಾಗಿದ್ದಾರೆ
ಯುವದಸರಾದ ವರ್ಣರಂಜಿತ ವೇದಿಕೆಯಲ್ಲಿ ನಡೆದ ಈ ಸಮಾರಂಭದಲ್ಲಿ ಸಂಸದ ಪ್ರತಾಪಸಿಂಹ, ರಾಧಿಕಾ ಕುಮಾರಸ್ವಾಮಿ, ನಟ ರಮೇಶ್ ಅರವಿಂದ್, ನಿರ್ದೇಶಕ ಶ್ರೀಜೈ ಹಾಗೂ ಚಿತ್ರತಂಡದ ಅನೇಕ ಸದಸ್ಯರು ಭಾಗವಹಿಸಿದ್ದರು.
Advertisement