ಕಾರು ನಿಲ್ಲಿಸಿ ವಯಸ್ಸಾದ ವ್ಯಕ್ತಿಗೆ ಹಣ ನೀಡಿದ ಸ್ಯಾಂಡಲ್‌ವುಡ್‌ ಖ್ಯಾತ ನಟ!

ರಣ ಬಿಸಿಲಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ವಯಸ್ಸಾದ ವ್ಯಕ್ತಿಯೊಬ್ಬರಿಗೆ ಸ್ಯಾಂಡಲ್‌ವುಡ್‌ನ ಖ್ಯಾತ ನಟರೊಬ್ಬರು ಹಣ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಶಿವರಾಜ್ ಕುಮಾರ್
ಶಿವರಾಜ್ ಕುಮಾರ್

ಬೆಂಗಳೂರು: ರಣ ಬಿಸಿಲಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ವಯಸ್ಸಾದ ವ್ಯಕ್ತಿಯೊಬ್ಬರಿಗೆ ಸ್ಯಾಂಡಲ್‌ವುಡ್‌ನ ಖ್ಯಾತ ನಟರೊಬ್ಬರು ಹಣ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. 

ನಾಗವಾರದ ಬಳಿ ಶಿವರಾಜ್ ಕುಮಾರ್ ಹೋಗುತ್ತಿದ್ದಾಗ ಬಿಸಿಲಲ್ಲಿ ನಿಂತಿದ್ದ ವೃದ್ಧರೊಬ್ಬರನ್ನು ನೋಡಿದ್ದಾರೆ. ಕೂಡಲೇ ತಮ್ಮ ಕಾರನ್ನು ನಿಲ್ಲಿಸಿ ಜೇಬಿನಲ್ಲಿದ್ದ ಹಣವನ್ನು ತೆಗೆದು ವೃದ್ಧನಿಗೆ ನೀಡಿದ್ದಾರೆ.

ಇದನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಆದರೆ ಸ್ವಲ್ಪ ಗಮನಿಸಿದಾಗ ಗೊತ್ತಾಗುತ್ತದೆ. ಹಣ ನೀಡಿದ ನಂತರ ಶಿವಣ್ಣ ಫೋಟೋ ಕ್ಲಿಕ್ಕಿಸಿದವರಿಗೆ ಒಂದು ಲುಕ್ ಕೊಟ್ಟು ಅಲ್ಲಿಂದ ಹೊರಟು ಹೋದರು.

ಈ ಫೋಟೋವನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದು ಈ ಫೋಟೋಗಳು ವೈರಲ್ ಆಗಿದೆ. ಇದನ್ನು ನೋಡಿದ ಶಿವಣ್ಣ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com