ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಮ್ಯಾನೇಜರ್ ಶ್ರೀನಿವಾಸ್ ಅವರನ್ನು ಆ ಕೆಲಸದಿಂದ ಕಿತ್ತು ಹಾಕಲಾಗಿದೆ. ಈ ಬಗ್ಗೆ ಡಿ ಕಂಪನಿ ಫ್ಯಾನ್ಸ್ ಅಸೋಸಿಯೇಷನ್ ಅಧಿಕೃತ ಖಾತೆಯಲ್ಲಿ ತಿಳಿಸಲಾಗಿದೆ.
ಡಿಬಾಸ್ ಬಳಿ ಕೆಲಸ ನಿರ್ವಹಿಸುತ್ತಿದ್ದ ಶ್ರೀನಿವಾಸ್ ಅವರನ್ನು ತೂಗುದೀಪ ಪರಿವಾರ ಹಾಗೂ ಅಭಿಮಾನಿ ಸಂಘದ ವ್ಯವಹಾರಿಕ ಚಟುವಟಿಕೆಗಳಿಂದ ದೂರ ಸರಿಸಲಾಗಿದೆ. ಅವರ ಜೊತೆ ಡಿ ಬಾಸ್ ಅವರ ಹೆಸರಲ್ಲಿ ಯಾವುದೇ ವ್ಯವಹಾರ ಮಾಡದಿರಿ ಎಂದು ಡಿ ಕಂಪನಿ ಮನವಿ ಮಾಡಿಕೊಂಡಿದೆ.ಕಳೆದ ವರ್ಷ ಮಲ್ಲಿಕಾರ್ಜುನ ಕೂಡಾ ಹಣಕಾಸು ವ್ಯವಹಾರದ ವಿಚಾರವಾಗಿ ದರ್ಶನ್ ಗುಂಪಿನಿಂದ ಹೊರ ಬಂದಿದ್ದರು.
ಮತ್ತೊಂದೆಡೆ ಇದನ್ನು ಫೇಸ್ ಬುಕ್ ಪೇಜ್ ನಲ್ಲಿ ಸ್ಪಷ್ಟಪಡಿಸಿರುವ ಶ್ರೀನಿವಾಸ್, ನನಗೂ ಮತ್ತು ದರ್ಶನ್ ತೂಗುದೀಪ ಅವರಿಗೂ ಕೆಲಸದ ವಿಷಯವಾಗಿ ಮನಸ್ತಾಪ ಬಂದಿರುವುದು ನಿಜ. ಆದ ಕಾರಣ ನಾನು ಸೆಪ್ಟೆಂಬರ್ 18, 2019 ರಿಂದ ಅವರ ಬಳಿ ಕೆಲಸ ಬಿಟ್ಟಿರುತ್ತೇನೆ. ನನ್ನ ಮೇಲೆ ಯಾರೂ ಸಹ ಇಲ್ಲ ಸಲ್ಲದ ಆರೋಪ ಹೊರಿಸಬೇಡಿ. ನನಗೂ ಕುಟುಂಬ ಇದೆ. ನಾನು ಬೆಂಗಳೂರು ಬಿಟ್ಟು ಎಲ್ಲಿಗೂ ಹೋಗಿಲ್ಲ. ಇಲ್ಲಿಯೇ ಕೆಲಸ ಮಾಡಿಕೊಂಡು ಇದ್ದೇನೆ ಎಂದು ತಿಳಿಸಿದ್ದಾರೆ.
Advertisement