ಬೆಂಗಳೂರು: ಖಳನಟ ಪ್ರಕಾಶ್ ರೈ ರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ಅಖಿಲ ಭಾರತ ಹಿಂದೂ ಮಹಾಸಭಾ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.
ಪ್ರಕಾಶ್ ರೈ ಹಿಂದೂ ದೇವರ ಹಾಗೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಅವರನ್ನು ಚಿತ್ರರಂಗದಿಂದ ದೂರವಿಡಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಪ್ರಕಾಶ್ ರೈ ರಾಮಾಯಣದಲ್ಲಿ ಬರುವ ರಾಮ-ಲೀಲಾ ಬಗ್ಗೆ ಮಾತನಾಡುತ್ತಾ, ಅದಕ್ಕೆ ಪೋರ್ನ್ ಸೈಟ್ ಬಗ್ಗೆ ಉದಾಹರಣೆ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.
Advertisement