ಬೆಂಗಳೂರು: ಚಿರಂಜೀವಿ ಸರ್ಜಾ ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದು, ಅವರ ಮುಂದಿನ ಚಿತ್ರವನ್ನು ಟಿಆರ್ ಚಂದ್ರಶೇಖರ್ ನಿರ್ಮಿಸುತ್ತಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬುದ್ದಿವಂತ-2 ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ಮಹೇಶ್ ಚೈತನ್ಯ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.
ಕಮರ್ಷಿಯಲ್, ಎಂಟರ್ ಟೈನರ್ ಚಿತ್ರ ಇದಾಗಿದ್ದು, ಕ್ರಿಸ್ಟರ್ ಪಾರ್ಕ್ ಸಿನಿಮಾಸ್ ಪ್ರೊಡಕ್ಷನ್ ಸಂಸ್ಥೆಯ 8ನೇ ಸಿನಿಮಾವಾಗಿದೆ. ನವೆಂಬರ್ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗುವ ಸಾಧ್ಯತೆ ಇದೆ. ಸಿಂಗ ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಚಿತ್ರವಾಗಿತ್ತು. ಪ್ರಸ್ತುತ ಖಾಕಿ ಚಿತ್ರದ ಹಾಡಿನ ಭಾಗದ ಚಿತ್ರೀಕರಣದಲ್ಲಿ ಅವರು ಬ್ಯುಸಿಯಾಗಿದ್ದಾರೆ.
ಕಡ್ಡಿಪುಡಿ ಚಂದ್ರು ನಿರ್ಮಿಸುತ್ತಿರುವ ಜುಗಾರಿ ಕ್ರಾಸ್ ಸೇರಿದಂತೆ ರಣಂ, ರಾಜ ಮಾರ್ತಂಡ ಚಿತ್ರಗಳಲ್ಲಿಯೂ ಚಿರಂಜೀವಿ ಸರ್ಜಾ ಅಭಿನಯಿಸುತ್ತಿದ್ದಾರೆ.
Advertisement