ರಿಷಬ್ ಶೆಟ್ಟಿ ರುದ್ರ ಪ್ರಯಾಗದಲ್ಲಿ ಬಾಲಿವುಡ್ ನಟ! 

ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ 'ರುದ್ರ ಪ್ರಯಾಗ' ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಾರಿ ನಿರೀಕ್ಷೆಯನ್ನು ಹುಟ್ಟು ಹಾಕುತ್ತಿದೆ.
ರಿಷಭ್ ಶೆಟ್ಟಿ
ರಿಷಭ್ ಶೆಟ್ಟಿ

ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ 'ರುದ್ರ ಪ್ರಯಾಗ' ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಾರಿ ನಿರೀಕ್ಷೆಯನ್ನು ಹುಟ್ಟು ಹಾಕುತ್ತಿದೆ.

ಕಲಾವಿದರ ಆಯ್ಕೆ ವಿಚಾರದಲ್ಲಿ ಕುತೂಹಲ ಹೆಚ್ಚಿಸುತ್ತಿದೆ 'ರುದ್ರ ಪ್ರಯಾಗ'. ಮೊನ್ನೆ ಮೊನ್ನೆಯಷ್ಟೆ ಹಿರಿಯ ನಟ ಅನಂತ್ ನಾಗ್ ರಿಷಬ್ ಜೊತೆಯಾಗಿದ್ದಾರೆ.

ಇದರ ಬೆನ್ನಲ್ಲೆ ಈಗ ಮತ್ತಿಬ್ಬರು ಕಲಾವಿದರ ಹೆಸರು ಕೇಳಿ ಬರುತ್ತಿದೆ. ಹೌದು ಚಿತ್ರಕ್ಕೆ ನಾಯಕಿಯಾಗಿ ಶ್ರದ್ಧಾ ಶ್ರೀನಾಥ್ ಬಣ್ಣ ಹಚ್ಚಲಿದ್ದಾರೆ ಎಂದು ಹೇಳಲಾಗುತ್ತಿದೆ. 

ಟಾಲಿವುಡ್ ಮತ್ತು ಕಾಲಿವುಡ್ ನಲ್ಲಿ ಬ್ಯುಸಿ ಇರುವ ಶ್ರದ್ಧಾ ರುದ್ರ ಪ್ರಯಾಗದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಕಡೆ ಬರುತ್ತಿದ್ದಾರೆ. 

ಬಾಲಿವುಡ್ ನ ಖ್ಯಾತ ನಟ ರುದ್ರ ಪ್ರಯಾಗ ಸೇರಿಕೊಳ್ಳುವ ಸಾಧ್ಯತೆ ಇದೆ. ಬಾಲಿವುಡ್ ನಲ್ಲಿ ಮಿಂಚುತ್ತಿರುವ ಕನ್ನಡದ ನಟ ಗುಲ್ ಶನ್ ದೇವಯ್ಯ ನಾಯಕನಾಗಿ 

ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೆ ರಿಷಬ್, ಗುಲ್ ಶನ್ ಜೊತೆ ಮಾತುಕತೆ ನಡೆಸಿದ್ದಾರಂತೆ. ರಿಷಬ್ ಹೇಳಿದ 'ರುದ್ರ ಪ್ರಯಾಗ' ಕಥೆ ಕೇಳಿ ಗುಲ್ ಶನ್ ಸಖತ್ ಇಂಪ್ರೆಸ್ ಆಗಿದ್ದಾರಂತೆ. ಡೇಟ್ ಹೊಂದಾಣಿಕೆಯಾಗಿ ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ರೆ, ಗುಲ್ ಶನ್ ಮೊದಲ ಬಾರಿಗೆ ಕನ್ನಡ ಚಿತ್ರ ಪ್ರೇಕ್ಷಕರ ಮುಂದೆ ಬರಲಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com