ವಿಷ್ಣುವಿನ ಘನತೆಗೆ ಸಾಸಿವೆ ಕಾಳಿನಷ್ಟು ಧಕ್ಕೆಯಾಗದು- ಸುಮಲತಾ

ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಕುರಿತು ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಇಡೀ ಸ್ಯಾಂಡಲ್ ವುಡ್ ಆಕ್ರೋಶಗೊಂಡಿದೆ.
ಡಾ. ವಿಷ್ಣುವರ್ಧನ್, ಸುಮಲತಾ
ಡಾ. ವಿಷ್ಣುವರ್ಧನ್, ಸುಮಲತಾ
Updated on

ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಕುರಿತು ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಇಡೀ ಸ್ಯಾಂಡಲ್ ವುಡ್ ಆಕ್ರೋಶಗೊಂಡಿದೆ.
 
ಶನಿವಾರ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸುದೀಪ್, ಜಗ್ಗೇಶ್, ಗಣೇಶ್, ಶ್ರೀಮುರುಳಿ, ಸೃಜನ್ ಲೋಕೇಶ್ ಸೇರಿದಂತೆ ಅನೇಕ ನಿರ್ದೇಶಕರು ವಿಜಯ್ ರಂಗರಾಜು ಅವರ ಮಾತುಗಳನ್ನು ಖಂಡಿಸಿದ್ದರು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಸಂಸದೆ ಸುಮಲತಾ ಅಂಬರೀಷ್ , ಸರಣಿ ಟ್ವೀಟ್ ಮಾಡಿದ್ದಾರೆ. ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ವರ್ಚಸ್ಸು ಅವರನ್ನು ಪ್ರೀತಿಸುವ ಅಸಂಖ್ಯಾತ ಅಭಿಮಾನಿಗಳಿಗೆ ಗೊತ್ತು. ನಾಯಿ ಬೊಗಳಿದರೆ ದೇವಲೋಕ ಹಾಳಾಗದು ಎಂಬುದಕ್ಕೆ ಇದೊಂದು ಸರಿಯಾದ ಉದಾಹರಣೆ. ಇಂತಹ 'ಚೀಪ್ ಪಬ್ಲಿಸಿಟಿ' ಗಾಗಿ ಮನಬಂದಂತೆ ಬಾಯಿ ಹರಟುವ ವ್ಯಕ್ತಿಗಳು ಕ್ಷಮೆ ಕೇಳಲು ಅರ್ಹರಲ್ಲ. ಕ್ಷಮಿಸಲು ಆಗದು, ಕ್ಷಮಿಸಲು ಬಾರದು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com