ಪ್ರತಿಮೆಯನ್ನು ತೆರವುಗೊಳಿಸಿರುವುದು
ಪ್ರತಿಮೆಯನ್ನು ತೆರವುಗೊಳಿಸಿರುವುದು

ರಾತ್ರೋರಾತ್ರಿ ಡಾ.ವಿಷ್ಣುವರ್ಧನ್ ಪ್ರತಿಮೆ ತೆರವು, ಅಭಿಮಾನಿಗಳಿಂದ ಆಕ್ರೋಶ

ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಇರುವ ನಟ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದ್ದು, ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅವರ ಅಭಿಮಾನಿಗಳು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 
Published on

ಬೆಂಗಳೂರು: ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಇರುವ ನಟ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದ್ದು, ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅವರ ಅಭಿಮಾನಿಗಳು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಟೋಲ್'ಗೇಟ್ ಸರ್ಕಲ್ ಬಳಿ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಎಂದು ಹೆಸರಿಡಲಾಗಿದ್ದು, ವಿಷ್ಣುವರ್ಧನ್ ಅವರ ಪ್ರತಿಮೆ ಇರುವ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಪ್ರತಿಮೆ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿಯೇ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ತೆರವುಗೊಳಿಸಲಾಗಿದೆ ಎಂಬ ಆರೋಪಗಳು ಇದೀಗ ಕೇಳಿ ಬಂದಿವೆ. 

ಈ ನಡುವೆ ವಿಚಾರ ತಿಳಿಯುತ್ತಿದ್ದಂತೆಯ ಸ್ಥಳಕ್ಕೆ ಜಮಾಯಿಸಿರುವ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಮೆ ಮರುಸ್ಥಾಪನೆ ಮಾಡುವಂತೆ ಆಗ್ರಹಿಸಿದ್ದಾರೆ. 

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಚಿವ ವಿ.ಸೋಮಣ್ಣ ಅವರು, ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಮಾತುಕತೆ ಮೂಲಕವೇ ತೆರವು ಮಾಡಲಾಗಿದೆ. ಆದರೆ, ಯಾವ ಕಾರಣಕ್ಕೆ ಪ್ರತಿಭಟನೆ ನಡೆಯುತ್ತಿದೆ ಎಂಬುದು ತಿಳಿಯುತ್ತಿಲ್ಲ. ಕೂಡಲೇ ವಿಷ್ಣುವರ್ಧನ್ ಅವರ ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆಂದು ವರದಿಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com