ಭಜರಂಗಿ-2 ಕಲಾವಿದರಿದ್ದ ಬಸ್ಸು ಅಪಘಾತ

ಇತ್ತೀಚೆಗಷ್ಟೇ ಭಜರಂಗಿ-2 ಚಿತ್ರ ಚಿತ್ರೀಕರಣದ ವೇಳೆ ಸಿನಿಮಾ ಸೆಟ್ ಗೆ ಬೆಂಕಿ ತಗುಲಿ ಸುದ್ದಿಯಾಗಿದ್ದ ಬೆನ್ನಲ್ಲೇ ಇಂದು ಅದೇ ಚಿತ್ರದ ಕಲಾವಿದರು ತೆರಳುತ್ತಿದ್ದ ಬಸ್ಸೊಂದು ಶನಿವಾರ ಬೆಳಗ್ಗೆ ಅಪಘಾತಕ್ಕೀಡಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನೆಲಮಂಗಲ: ಇತ್ತೀಚೆಗಷ್ಟೇ ಭಜರಂಗಿ-2 ಚಿತ್ರ ಚಿತ್ರೀಕರಣದ ವೇಳೆ ಸಿನಿಮಾ ಸೆಟ್ ಗೆ ಬೆಂಕಿ ತಗುಲಿ ಸುದ್ದಿಯಾಗಿದ್ದ ಬೆನ್ನಲ್ಲೇ ಇಂದು ಅದೇ ಚಿತ್ರದ ಕಲಾವಿದರು ತೆರಳುತ್ತಿದ್ದ ಬಸ್ಸೊಂದು ಶನಿವಾರ ಬೆಳಗ್ಗೆ ಅಪಘಾತಕ್ಕೀಡಾಗಿದೆ. 

ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರ ಬಳಿ ಬಸ್ಸು ಅಪಘಾತವಾಗಿದ್ದು, ಕಲಾವಿದರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಸುಮಾರು 60ಕ್ಕೂ ಹೆಚ್ಚು ಕಲಾವಿದರಿದ್ದ ಬಸ್ಸು, ಮೋಹನ್ ಬಿಕೆರೆ ಸ್ಟುಡಿಯೋದತ್ತ  ತೆರಳುತ್ತಿದ್ದಾಗ ಈ ವೇಳೆ ಮೊದಲು ಕಾರಿಗೆ ಢಿಕ್ಕಿಯಾಗಿ ಬಳಿಕ ರಸ್ತೆಯ ಪಕ್ಕದಲ್ಲಿದ್ದ  ಹೆವಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.

ಈ ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಸ್ಸು ಮೇಲೆಯೇ ಬಿದ್ದಿದೆ ಎಂದು ತಿಳಿದು ಬಂದಿದೆ. 

ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಮೊನ್ನೆಯಷ್ಟೆ ಇದೇಚಿತ್ರದ ಅದ್ಧೂರಿ ಸೆಟ್ ಗೆ ಬೆಂಕಿ ತಗುಲಿತ್ತು. ಆದರೆ, ಯಾವುದೇ ಅನಾಹುತ ಸಂಭವಿಸಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com