ಕೊರೋನಾ ಭೀತಿ: ನಟ ಶಿವರಾಜ್ ಕುಮಾರ್ ಶಬರಿಮಲೆ ಯಾತ್ರೆ ರದ್ದು

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಚಿತ್ರೀಕರಣ, ಚಿತ್ರ ಪ್ರದರ್ಶನ ಮೊಟಕುಗೊಂಡಿದ್ದು, ಇದೀಗ ಚಿತ್ರನಟ ಶಿವರಾಜ್ ಕುಮಾರ್ ಅವರ ಶಬರಿ ಮಲೆ ಯಾತ್ರೆ ಸಹ ರದ್ದಾಗಿದೆ. 
ನಟ ಶಿವರಾಜ್ ಕುಮಾರ್
ನಟ ಶಿವರಾಜ್ ಕುಮಾರ್
Updated on

ಬೆಂಗಳೂರು: ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಚಿತ್ರೀಕರಣ, ಚಿತ್ರ ಪ್ರದರ್ಶನ ಮೊಟಕುಗೊಂಡಿದ್ದು, ಇದೀಗ ಚಿತ್ರನಟ ಶಿವರಾಜ್ ಕುಮಾರ್ ಅವರ ಶಬರಿ ಮಲೆ ಯಾತ್ರೆ ಸಹ ರದ್ದಾಗಿದೆ. 

ಶಿವಕುಮಾರ್ ಕುಮಾರ್ ಅವರು ಪ್ರತಿ ವರ್ಷ ಮಾಲೆ ಧರಿಸಿಕೊಂಡು ತಮ್ಮ ಆತ್ಮೀಯರೊಂದಿಗೆ ಶಬರಿಮಲೆಯ ಸ್ವಾಮಿ ಅಯ್ಯಪ್ಪ ದರ್ಶನಕ್ಕೆ ಹೋಗುತ್ತಿದ್ದರು. ಅದರಂತೆ ಈ  ಬಾರಿಯೂ ಅವರ ಸ್ವಾಮಿ ಅಯ್ಯಪ್ಪ ದೇವಾಲಯಕ್ಕೆ ಹೋಗಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಆದರೆ,  ಕೊರೋನಾ ವೈರಸ್ ಭೀತಿಯಿಂದಾಗಿ  ಶಿವರಾಜ್ ಕುಮಾರ್ ಅವರು ಶಬರಿ ಮಲೆ ಯಾತ್ರೆಯನ್ನು ರದ್ದುಗೊಳಿಸಿದ್ದಾರೆ.

ಇಂದು ಅವರು ತಮ್ಮ ನಿವಾಸದಲ್ಲೇ ಪೂಜೆ ಮಾಡಿ ಮಾಲೆ ಬಿಚ್ಚಿದರು. ಸಹೋದರ ರಾಘವೇಂದ್ರ ರಾಜ್ ಕುಮಾರ್ ಸೇರಿ ಕುಟುಂಬ ಸದಸ್ಯರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com