ಜಗ್ಗೇಶ್
ಜಗ್ಗೇಶ್

ಮಂತ್ರಾಲಯದಲ್ಲಿ ಜನ್ಮದಿನ ಆಚರಿಸಿಕೊಂಡ ಜಗ್ಗೇಶ್, 'ತೋತಾಪುರಿ'' ಜತೆಗೆ 'ರಂಗನಾಯಕ'ನಾಗಲೂ ಸೈ ಎಂದ ನವರಸನಾಯಕ 

ನವರಸ ನಾಯಕ ಜಗ್ಗೇಶ್ ಮಂಗಳವಾರ (ಮಾರ್ಚ್ ೧೭) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರು ಶ್ರೀರಾಘವೇಂದ್ರ ಸ್ವಾಮಿಗಳ ಭಕ್ತರಾಗಿದ್ದು ತನ್ನ ಕುಟುಂಬದೊಂದಿಗೆ ಮಂತ್ರಾಲಯದಲ್ಲಿ ಈ ದಿನ ಕಳೆಯಲಿದ್ದಾರೆ.  ವಿಜಯಪ್ರಸಾದ್ ನಿರ್ದೇಶನದ ಮತ್ತು ಕೆ.ಎ.ಸುರೇಶ್ ನಿರ್ಮಿಸಲಿರುವ ಅವರ ಮುಂಬರುವ ಚಿತ್ರ "ತೋತಾಪುರಿ" ಶೂಟಿಂಗ್ ನಲ್ಲಿ ತೊಡಗಿರುವ ನಟ ಚೊತ್ರದಲ್ಲಿ ಗುರುರಾ
Published on

ನವರಸ ನಾಯಕ ಜಗ್ಗೇಶ್ ಮಂಗಳವಾರ (ಮಾರ್ಚ್ ೧೭) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರು ಶ್ರೀರಾಘವೇಂದ್ರ ಸ್ವಾಮಿಗಳ ಭಕ್ತರಾಗಿದ್ದು ತನ್ನ ಕುಟುಂಬದೊಂದಿಗೆ ಮಂತ್ರಾಲಯದಲ್ಲಿ ಈ ದಿನ ಕಳೆಯಲಿದ್ದಾರೆ.  ವಿಜಯಪ್ರಸಾದ್ ನಿರ್ದೇಶನದ ಮತ್ತು ಕೆ.ಎ.ಸುರೇಶ್ ನಿರ್ಮಿಸಲಿರುವ ಅವರ ಮುಂಬರುವ ಚಿತ್ರ "ತೋತಾಪುರಿ" ಶೂಟಿಂಗ್ ನಲ್ಲಿ ತೊಡಗಿರುವ ನಟ ಚೊತ್ರದಲ್ಲಿ ಗುರುರಾಯರ ಭಕ್ತನಾದ ರೈತನ ಗೆಟಪ್ ನಲ್ಲಿ ಕಾಣಿಸುತ್ತಿದ್ದಾರೆ.

ಚಿತ್ರ ಎರಡು ಭಾಗಗಳಿಂದ ಕೂಡಿದ್ದು ನಿರ್ಮಾಪಕರು ಇದರ ಬಿಡುಗಡೆಗೆ ಮುನ್ನ ರಡೂ ಭಾಗಗಳ ಚಿತ್ರೀಕರಣವನ್ನು ಪೂರ್ಣಗೊಳಿಸಲು ನೋಡುತ್ತಿದ್ದಾರೆ. ತಂಡವು ಶೂಟಿಂಗ್‌ನ ಕೊನೆಯ ಹಂತದಲ್ಲಿದೆ ಮತ್ತು ಈಗ ತೋತಾಪುರಿಯ ಯ ಮೊದಲ ಭಾಗಕ್ಕೆ ಹಾಡುಗಳನ್ನು ಚಿತ್ರೀಕರಿಸಬೇಕಾಗಿದೆ, ಮತ್ತು ಸರಣಿಯ ಎರಡನೇ ಭಾಗಕ್ಕೆ ಕೆಲವು ಸನ್ನಿವೇಶಗಳನ್ನು ಚಿತ್ರೀಕರಿಸಬೇಕಾಗಿದೆ. 

ಏತನ್ಮಧ್ಯೆ ಜಗ್ಗೇಶ್ "ರಂಗನಾಯಕ" ಚಿತ್ರದ ಶೂಟಿಂಗ್  ಪ್ರಾರಂಭಿಸಲು ತಯಾರಾಗುತ್ತಿದ್ದಾರೆ. ಇದು ನಿರ್ದೇಶಕ ಗುರುಪ್ರಸಾದ್ ಅವರೊಂದಿಗಿನ ಯೋಜನೆಯಾಗಿದೆ. ಅವರೊಂದಿಗೆ ಈ ಹಿಂದೆ ಮಠ ಹಾಗೂ ಎದ್ದೇಳು ಮಂಜುನಾಥ ಚಿತ್ರಗಳಲ್ಲಿ ಜಗ್ಗೇಶ್ ಕೆಲಸ ಮಾಡಿದ್ದರು.

ಚಿತ್ರ ಇದೇ ಏಪ್ರಿಲ್  2ಕ್ಕೆ ಸೆಟ್ಟೇರಲಿದೆ. . ತಯಾರಕರು ಉಳಿದ ಪಾತ್ರವರ್ಗವನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ರಾಧಿಕಾ ಕುಮಾರಸ್ವಾಮಿ ಮತ್ತು ರಚಿತಾ ರಾಮ್ ಅವರಂತಹ ಹೆಸರುಗಳು ಸಹ ಕೇಳಿ ಬಂದಿದೆ.  ಆದರೆ, ತಯಾರಕರು ಇನ್ನೂ ನಾಯಕಿ ಬಗ್ಗೆ ಅಧಿಕೃತ ಘೋಷಣೆ ಂಆಡಿಲ್ಲ. . ಅನೂಪ್ ಸೀಳನ್  ಸಂಗೀತ ಸಂಯೋಜಿಸುತ್ತಿರುವ ಈ ಚಿತ್ರ ವಿಖ್ಯಾತ್  ಚಿತ್ರ ಬ್ಯಾನರ್ ಅಡಿಯಲ್ಲಿ ಮೂಡಿ ಬರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com