ನಿರ್ಭಯಾ ಹತ್ಯಾಚಾರಿಗಳಿಗೆ ಶಿಕ್ಷೆ: ಹಂತಕರ ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ರೂ.1 ಲಕ್ಷ ದೇಣಿಗೆ ನೀಡಿದ ನಟ ಜಗ್ಗೇಶ್!

ನಿರ್ಭಯಾ ಹತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳಿಗೆ ಶುಕ್ರವಾರ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದ್ದು, ಅಪರಾಧಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ಸ್ಯಾಂಡಲ್'ವುಡ್'ನ ನವರಸ ನಾಯಕ ಜಗ್ಗೇಶ್ ಅವರು ರೂ.1 ಲಕ್ಷ ದೇಣಿಗೆ ನೀಡಿದ್ದಾರೆ. 
ನಿರ್ಭಯಾ ಹತ್ಯಾಚಾರಿಗಳಿಗೆ ಶಿಕ್ಷೆ: ಹಂತಕರ ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ರೂ.1 ಲಕ್ಷ ದೇಣಿಗೆ ನೀಡಿದ ನಟ ಜಗ್ಗೇಶ್!
ನಿರ್ಭಯಾ ಹತ್ಯಾಚಾರಿಗಳಿಗೆ ಶಿಕ್ಷೆ: ಹಂತಕರ ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ರೂ.1 ಲಕ್ಷ ದೇಣಿಗೆ ನೀಡಿದ ನಟ ಜಗ್ಗೇಶ್!
Updated on

ಬೆಂಗಳೂರು: ನಿರ್ಭಯಾ ಹತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳಿಗೆ ಶುಕ್ರವಾರ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದ್ದು, ಅಪರಾಧಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ಸ್ಯಾಂಡಲ್'ವುಡ್'ನ ನವರಸ ನಾಯಕ ಜಗ್ಗೇಶ್ ಅವರು ರೂ.1 ಲಕ್ಷ ದೇಣಿಗೆ ನೀಡಿದ್ದಾರೆ. 

ನಿರ್ಭಯಾ ಹಂತಕರಿಗೆ ಈ ಹಿಂದೆ ಗಲ್ಲು ಶಿಕ್ಷೆ ಪ್ರಕಟವಾದ ವೇಳೆ ಹೇಳಿಕೆ ನೀಡಿದ್ದ ಜಗ್ಗೇಶ್ ಅವರು, ಹ್ಯಾಂಗ್'ಮನ್'ಗೆ ರೂ.1 ಲಕ್ಷ ನೀಡುವುದಾಗಿ ತಿಳಿಸಿದ್ದರು. ಇದರಂತೆ ಕೊನೆಗೂ ಹಂತಕರಿಗೆ ಗಲ್ಲು ಶಿಕ್ಷೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುವುದಾಗಿ ಜಗ್ಗೇಶ್ ತಿಳಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೊಟ್ಟ ಮಾತಿನಂತೆ ರೂ.1 ಲಕ್ಷವನ್ನು ನಿರ್ಭಯಾ ಹಂತಕರ ಹ್ಯಾಂಗ್'ಮನ್'ಗೆ ದೇಣಿಗೆ ನೀಡುತ್ತಿದ್ದೇನೆ. ದೇವನೊಬ್ಬನಿರುವ ಅವ ಎಲ್ಲಾ ನೋಡುತ್ತಿರುವ. ಸತ್ಯದ ಹಾದಿಯಲ್ಲಿ ನಡೆದವನಿಗೆ ಭಯವಿಲ್ಲಾ. ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪುವುದಿಲ್ಲ. ಈ ದಿನಕ್ಕೆ ಹಲ್ಲು ಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ. ಸುದ್ದಿ ಕೇಳಲು ನಿದ್ರೆ ಮಾಡದೆ ಕಾದೆ. ಹರಿಓಂ. ಶುಭದಿನ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com