‘ಒಂದು ಶಿಕಾರಿಯ ಕತೆ ’ಚಿತ್ರದ ನಾಯಕ ನಟ ಪ್ರಜ್ವಲ್ ಅಭಿಮನ್ಯು ಇದರ ನಾಯಕ ನಟ. ಇವರಿಬ್ಬರ ಕಾಂಬಿನೇಷನ್ ಸಿನಿಮಾಕ್ಕೆ ದೇವದತ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಈ ಹಿಂದೆ ಇವರು ‘ಸೈಕೋ’ ಚಿತ್ರವನ್ನು ನಿರ್ದೇಶಿಸಿ ತೆರೆಗೆ ತಂದಿದ್ದರು. ಈ ಚಿತ್ರಕ್ಕೆ ಗಾಯಕ ಹಾಗೂ ಸಂಗೀತ ನಿರ್ದೇಶಕ ರಘು ದಿಕ್ಷೀತ್ ಹಾಡಿದ್ದ ‘ನೀನ ಪೂಜೆಗೆ ಬಂದೆ ಮಾದೇಶ್ವರ.’ಹಾಡು ಭಾರೀ ಜನಪ್ರಿಯತೆ ಪಡೆದಿತ್ತು.
12 ವರ್ಷದ ನಂತರ ನಿರ್ದೇಶಕ ದೇವದತ್ ‘ಎಸ್ ’ ಹೆಸರಿನ ಚಿತ್ರಕ್ಕೆ ಕತೆ, ಚಿತ್ರಕತೆ ಹಾಗೂ ಸಂಭಾಷಣೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ನಾಗರಾಜ್ ಕೆ.ವಿ ಎಂಬುವರು ಈ ಚಿತ್ರದ ನಿರ್ಮಾಣಕ್ಕೆ ಬಂಡವಾಳ ಹೂಡುತ್ತಿದ್ದಾರೆ.
ದೇವದತ್, ಈ ಚಿತ್ರದೊಂದಿಗೆ ಹೊಸದೊಂದು ಕತೆ ಹೇಳಲು ಹೊರಟಿದ್ದಾರಂತೆ.‘ಇದೊಂದು ಪಕ್ಕಾ ರೊಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾ. ಪ್ರೀತಿಯಲ್ಲೆ ಹೊಸತರೆನಾದ ಕತೆ ಇಲ್ಲಿದೆ. ಪ್ರೀತಿ ಜತೆಗೆ ಆ್ಯಕ್ಷನ್, ಸೆಂಟಿಮೆಂಟ್ ಕೂಡ ಚಿತ್ರದಲ್ಲಿದೆ
ಈಗಾಗಲೇ ಮೂರ್ನಾಲ್ಕು ಚಿತ್ರಗಳಲ್ಲಿ ನಾಯಕಿ ಆಗಿ ಅಭಿನಯಿಸಿರುವ ನಟಿ ಅದ್ವಿತಿ ಶೆಟ್ಟಿಗೆ ಈ ಚಿತ್ರದಲ್ಲಿ ವಿಭಿನ್ನವಾದ ಪಾತ್ರವೇ ಸಿಕ್ಕಿದೆಯಂತೆ.ಈ ಚಿತ್ರ ಒಪ್ಪಿಕೊಳ್ಳಲು ಮೂಲಕ ಕಾರಣವೇ ಅದಾಗಿದೆ ಎನ್ನುತ್ತಾರೆ.
ಹಾಗೆಯೇ ಒಂದು ಶಿಕಾರಿಯ ಕತೆ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದ ಪ್ರಜ್ವಲ್ ಅಭಿಮನ್ಯು ಕೂಡ ಒಂದೊಳ್ಳೆಯ ಪಾತ್ರ ಸಿಕ್ಕ ಖುಷಿಯಲ್ಲಿದ್ದಾರೆ.
ಪ್ರಭು ಕುಮಾರ್ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದು, ಪ್ರದೀಪ್ ವರ್ಮ ಸಂಗೀತ ನಿರ್ದೇಶನದ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಕೊರೋನಾ ಪರಿಸ್ಥಿತಿ ನೋಡಿಕೊಂಡು ಏಪ್ರಿಲ್ 10ರಂದು ಚಿತ್ರಕ್ಕೆ ಮುಹೂರ್ತ ಮುಗಿಸಲು ಚಿತ್ರ ತಂಡ ಸಿದ್ಧತೆ ನಡೆಸಿದೆ.
Advertisement