ಕೊರೋನಾ: ಸಿನಿಮಾ ಕಾರ್ಮಿಕರ ನೆರವಿಗೆ ಧಾವಿಸಿದ ನಿಖಿಲ್ ಕುಮಾರಸ್ವಾಮಿ

ಮಹಾಮಾರಿ ಕೊರೋನಾ ದಾಳಿಯಿಂದ ಇಡೀ ದೇಶವೇ ಲಾಕ್ ಡೌನ್ ಸ್ಥಿತಿಗೆ ತಲುಪಿರುವುದರಿಂದ, ಎಲ್ಲಾ ಉದ್ಯಮಗಳು ಸ್ಥಗಿತವಾಗಿವೆ. ಜನರು ಕೆಲಸ ಇಲ್ಲದೇ ದುಡಿಮೆಯಿಲ್ಲದೇ ಮನೆಯಲ್ಲೇ ಕೂರಬೇಕಾಗಿದೆ.
ನಟ ನಿಖಿಲ್
ನಟ ನಿಖಿಲ್
Updated on

ಬೆಂಗಳೂರು: ಮಹಾಮಾರಿ ಕೊರೋನಾ ದಾಳಿಯಿಂದ ಇಡೀ ದೇಶವೇ ಲಾಕ್ ಡೌನ್ ಸ್ಥಿತಿಗೆ ತಲುಪಿರುವುದರಿಂದ, ಎಲ್ಲಾ ಉದ್ಯಮಗಳು ಸ್ಥಗಿತವಾಗಿವೆ. ಜನರು ಕೆಲಸ ಇಲ್ಲದೇ ದುಡಿಮೆಯಿಲ್ಲದೇ ಮನೆಯಲ್ಲೇ ಕೂರಬೇಕಾಗಿದೆ. ಅದೇ ರೀತಿ ಸಿನಿಮಾ ಉದ್ಯಮ ಕೂಡ ಸಂಪೂರ್ಣ ಬಂದ್ ಆಗಿರುವ ಕಾರಣ ದಿನಗೂಲಿ ನಂಬಿ ಬದುಕುತ್ತಿದ್ದ ಸಿನಿಮಾ ಕಾರ್ಮಿಕ ವರ್ಗ ಕಂಗಾಲಾಗಿದೆ. 

ಅಂತಹ ಕಾರ್ಮಿಕರಿಗೆ ಸಹಾಯಹಸ್ತ ನೀಡಲು 'ಯುವರಾಜ' ನಿಖಿಲ್ ಕುಮಾರಸ್ವಾಮಿ ಅವರು ಮುಂದೆ ಬಂದಿದ್ದು, ಸಿನಿಮಾ ಕಾರ್ಮಿಕರಾದ ಲೈಟ್ಸ್ ಬಾಯ್ಸ್ ಅಸೋಸಿಯೇಷನ್, ಯುನಿಟ್ ಬಾಯ್ಸ್ ಅಸೋಸಿಯೇಷನ್, ಪ್ರೊಡಕ್ಷನ್ ಅಸೋಸಿಯೇಷನ್, ಫೈಟರ್ಸ್ ಅಸೋಸಿಯೇಷನ್, ಮೇಕಪ್ ಮೆನ್ ಸೇರಿದಂತೆ ಹಲವು ಕಾರ್ಮಿಕರಿಗೆ ತಲಾ 3 ಸಾವಿರ ರೂಪಾಯಿಯನ್ನು ನೇರವಾಗಿ ಅವರ ಅಕೌಂಟ್'ಗೆ ಜಮೆ ಮಾಡಲು ತೀರ್ಮಾನಿಸಿದ್ದಾರೆ.

ಈ ನಿರ್ಧಾರ ತಿಳಿದ ಸಿನಿ ಕಾರ್ಮಿಕರು ನಿಖಿಲ್ ಕುಮಾರಸ್ವಾಮಿ ಅವರನ್ನ ಶ್ಲಾಘಿಸಿ ಧನ್ಯವಾದ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com