ಶ್ರೀರಾಮನವಮಿಗೆ 'ರಾಬರ್ಟ್' ಕೊಡ್ತಿದ್ದಾನೆ ಈ ವಿಶೇಷ ಗಿಫ್ಟ್!

ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ ಗೆ ತೆರೆಗೆ ಬರಬೇಕಿತ್ತು. ಆದರೆ ಮಹಾಮಾರಿ ಕೊರೊನಾ ವೈರಸ್ ಹಾವಳಿಯ ಪರಿಣಾಮ ರಾಬರ್ಟ್ ರಿಲೀಸ್ ಮುಂದಕ್ಕೆ ಹೋಗಿದೆ.
ಶ್ರೀರಾಮನವಮಿಗೆ 'ರಾಬರ್ಟ್' ಕೊಡ್ತಿದ್ದಾನೆ ಈ ವಿಶೇಷ ಗಿಫ್ಟ್!
ಶ್ರೀರಾಮನವಮಿಗೆ 'ರಾಬರ್ಟ್' ಕೊಡ್ತಿದ್ದಾನೆ ಈ ವಿಶೇಷ ಗಿಫ್ಟ್!
Updated on

ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ ಗೆ ತೆರೆಗೆ ಬರಬೇಕಿತ್ತು. ಆದರೆ ಮಹಾಮಾರಿ ಕೊರೊನಾ ವೈರಸ್ ಹಾವಳಿಯ ಪರಿಣಾಮ ರಾಬರ್ಟ್ ರಿಲೀಸ್ ಮುಂದಕ್ಕೆ ಹೋಗಿದೆ.

ಈ ಸಂದರ್ಭದಲ್ಲಿ ಅಭಿಮಾನಿಗಳ ಬೇಸರ ಕಳೆಯಲು ರಾಬರ್ಟ್ ತಂಡದಿಂದ ಸಂತಸದ ಸುದ್ದಿ ಹೊರಬಿದ್ದಿದ್ದು, ರಾಮನವಮಿಗೆ ರಾಬರ್ಟ್ ತಂಡ ವಿಶೇಷ ಉಡುಗೊರೆ ನೀಡಲು ಸಜ್ಜಾಗಿದ್ದು, ಯೂಟ್ಯೂಬ್ ನಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ. 

ಈ ಕುರಿತು ಚಿತ್ರದ ನಿರ್ದೇಶಕ ತರುಣ್ ಸುಧೀರ್ ಟ್ವೀಟ್ ಮಾಡಿದ್ದು "ಶ್ರೀ ರಾಮನವಮಿ ಹಬ್ಬದ ಪ್ರಯುಕ್ತ ರಾಬರ್ಟ್ ತಂಡದಿಂದ ಜೈ ಶ್ರೀರಾಮ್ ಹಾಡಿನ ಹೊಸ ಅವತರಣಿಕೆ ಬಿಡುಗಡೆ ಆಗಲಿದೆ. " ಹೆಚ್ಚಿನ ವಿವರಗಳಿಗೆ ನಾಳೆಯವರೆಗೆ ನಿರೀಕ್ಷಿಸಿ" ಎಂದಿದ್ದಾರೆ.

ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿರುವ ಈ ಹಾಡಿಗೆ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯವಿರುವ ಜೈ ಶ್ರೀರಾಮ್ ಹಾಡು ಈ ಹಿಂದೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಸಾಕಷ್ತು ಸೆನ್ಶೇಷನ್ ಸೃಷ್ಟಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com