ಹೈದರಾಬಾದ್: ತೆಲುಗಿನ ಖ್ಯಾತ ನಟ ಚಿರಂಜೀವಿ ಅವರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.ಈ ವಿಷಯವನ್ನು ಸ್ವತಃ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇಂದು ಅವರು 'ಆಚಾರ್ಯ'ಚಿತ್ರದ ಶೂಟಿಂಗ್ ಗೆ ತೆರಳುವ ಮುನ್ನ ಶಿಷ್ಟಾಚಾರದಂತೆ ಕೋವಿಡ್ ಟೆಸ್ಟ್ ಮಾಡಿಸಿಕೊಂಡರು. ಆ ವೇಳೆ ಪಾಸಿಟಿವ್ ಬಂದಿದ್ದು ಯಾವುದೇ ರೋಗಲಕ್ಷಣಗಳು ಇಲ್ಲದಿರುವುದರಿಂದ ಮನೆಯಲ್ಲಿಯೇ ಕ್ವಾರಂಟೈನ್ ಗೊಳಗಾಗಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದಿರುವ ಚಿರಂಜೀವಿ ಯಾವುದೇ ಆತಂಕವಿಲ್ಲ, ಆದಷ್ಟು ಶೀಘ್ರವೇ ಗುಣಮುಖನಾಗಿ ನಿಮ್ಮ ಮುಂದೆ ಮತ್ತೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಕಳೆದ ವಾರ ಹೈದರಾಬಾದ್ ನೆರೆ ವಿಕೋಪ ಪರಿಹಾರ ನಿಧಿಗೆ 1 ಕೋಟಿ ರೂಪಾಯಿಗಳನ್ನು ನಟ ಚಿರಂಜೀವಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಭೇಟಿ ಮಾಡಿ ನೀಡಿದ್ದರು.
Advertisement