ತಾಳ ತಪ್ಪಿದ ಸಾಹಿತಿ ಕೆ. ಕಲ್ಯಾಣ್ ಬದುಕು: ಪತಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಅಶ್ವಿನಿ!

ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಗೀತರಚನಾಕಾರ ಕೆ. ಕಲ್ಯಾಣ್ ಪತ್ನಿ ಅಶ್ವಿನಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.
ಕೆ ಕಲ್ಯಾಣ್
ಕೆ ಕಲ್ಯಾಣ್
Updated on

ಬೆಳಗಾವಿ: ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಗೀತರಚನಾಕಾರ ಕೆ. ಕಲ್ಯಾಣ್ ಪತ್ನಿ ಅಶ್ವಿನಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. 

ಜೂನ್ 26ರಂದು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಅಶ್ವಿನಿ ಪರ ವಕೀಲ ಸತೀಶ್ ದಳವಾಯಿ ತಿಳಿಸಿದ್ದಾರೆ. 

ಜೂನ್ 26ರಂದು ಮಾಳ ಮಾರುತಿ ಠಾಣೆಗೆ ಅಶ್ವಿನಿ ಅವರು ದೂರು ಕೂಡ ನೀಡಿದ್ದರು. ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸದೆ, ಕಲ್ಯಾಣ್ ಕೊಟ್ಟಿರುವ ಸುಳ್ಳು ದೂರು ಸ್ವೀಕರಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಸತೀಶ್ ದಳವಾಯಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ಆಸ್ತಿಗಾಗಿಯೇ ಕಲ್ಯಾಣ್ ಮದುವೆಯಾಗಿದ್ದಾರೆ. ಇದೀಗ ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ   ನೀಡುತ್ತಿದ್ದಾರೆ ಎಂದು ಆರೋಪಿಸಿ ತಮ್ಮ ಕಕ್ಷಿದಾರರು 14 ವರ್ಷಗಳ ದಾಂಪತ್ಯ ಜೀವನ ಕೊನೆಗೊಳಿಸಿಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ ಎಂದು ದಳವಾಯಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com