ವೈಜನಾಥ್ ಬಿರಾದಾರ್  ಅಮಿತಾಭ್ ಬಚ್ಚನ್
ವೈಜನಾಥ್ ಬಿರಾದಾರ್ ಅಮಿತಾಭ್ ಬಚ್ಚನ್

ಬಿರಾದಾರ್ ಭಾರತದ ಹೆಮ್ಮೆ: ಕನ್ನಡ ನಟನಿಗೆ ಬಿಗ್ ಬಿ ಅಮಿತಾಬ್ ಪ್ರಶಂಸೆ

ಪಾತ್ರ ಯಾವುದಾದರೇನು, ಜೀವ ತುಂಬಿ ನಟಿಸುವುದಷ್ಟೇ ನನ್ನ ಕೆಲಸ ಎನ್ನುವ ವೈಜನಾಥ್ ಬಿರಾದಾರ್ ಅತ್ಯುತ್ತಮ ಕಲಾವಿದ.
Published on

ಪಾತ್ರ ಯಾವುದಾದರೇನು, ಜೀವ ತುಂಬಿ ನಟಿಸುವುದಷ್ಟೇ ನನ್ನ ಕೆಲಸ ಎನ್ನುವ ವೈಜನಾಥ್ ಬಿರಾದಾರ್ ಅತ್ಯುತ್ತಮ ಕಲಾವಿದ.

ಭಿಕ್ಷುಕ, ಕುಡುಕ, ಬಡವ ಮೊದಲಾದ ಪಾತ್ರಗಳಿಂದ 350ಕ್ಕೂ ಹಚ್ಚು ಚಿತ್ರಗಳ ಮೂಲಕ ರಸಿಕರನ್ನು ರಂಜಿಸುವ ಈ ನಟ ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಲೆಯನ್ನು ದೇವರೆಂದು ನಂಬಿರುವ ವೈಜನಾಥ್​ ಬಿರಾದರ್​ ಅವರು ಗಿರೀಶ್​​ ಕಾಸರವಳ್ಳಿ ನಿರ್ದೇಶನದ ಕನಸೆಂಬ ಕುದುರೆಯನೇರಿ ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿದ್ದು, ಅದಕ್ಕಾಗಿ ಸ್ಪೇನ್​ನ ಮ್ಯಾಡ್ರಿಡ್​ನಲ್ಲಿ ನಡೆದ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಎಂಬ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬಿರಾದರ್​ಗೆ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿರುವ ವಿಚಾರ ತಿಳಿದು ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ಇತ್ತೀಚೆಗಷ್ಟೆ ಕರೆ ಮಾಡಿ, ಶುಭಾಶಯ ತಿಳಿಸಿದ್ದಾರೆ. ಭಾರತೀಯನಿಗೆ ಈ ಗೌರವ ಸಿಕ್ಕಿರುವುದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com