ತೆಲುಗು ಹಾಸ್ಯನಟ ಕೊಸೂರಿ ವೇಣುಗೋಪಾಲ್ ಕೊರೋನಾಗೆ ಬಲಿ

ತೆಲುಗು ಚಿತ್ರರಂಗದ ಖ್ಯಾತ ಹಾಸ್ಯನಟ ಕೊಸುರಿ ವೇಣುಗೋಪಾಲ್ ನಿಧನ ಹೊಂದಿದ್ದಾರೆ. ಕೋವಿಡ್-19 ನಿಂದ ಬಳಲುತ್ತಿದ್ದ ವೇಣುಗೋಪಾಲ್ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ವೇಣು ಗೋಪಾಲ್
ವೇಣು ಗೋಪಾಲ್
Updated on

ಹೈದರಾಬಾದ್ : ತೆಲುಗು ಚಿತ್ರರಂಗದ ಖ್ಯಾತ ಹಾಸ್ಯನಟ ಕೊಸುರಿ ವೇಣುಗೋಪಾಲ್ ನಿಧನ ಹೊಂದಿದ್ದಾರೆ. ಕೋವಿಡ್-19 ನಿಂದ ಬಳಲುತ್ತಿದ್ದ ವೇಣುಗೋಪಾಲ್ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ದಿನಗಳಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಣುಗೋಪಾಲ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.   

ವೇಣುಗೋಪಾಲ್ ಪಶ್ಚಿಮ ಗೋದಾವರಿಯ ನರಸಾಪುರದವರು. ಚಿತ್ರರಂಗಕ್ಕೆ ಕಾಲಿಡುವ ಮೊದಲು ಭಾರತದ ಆಹಾರ ನಿಗಮದಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಕೆಲಸದ ಜೊತೆಗೆ ಸಿನಿಮಾಗಳಲ್ಲಿಯೂ ಅಭಿನಯಿಸುತ್ತಿದ್ದರು. 

ಮರ್ಯಾದ ರಾಮಣ್ಣ', 'ಚಲೋ', 'ಪಿಲ್ಲಾ ಜಮೀನ್ದಾದ್', ಸೇರಿದಂತೆ ಸಾಕಷ್ಟು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿದ್ದಾರೆ. 'ಮರ್ಯಾದ ರಾಮಣ್ಣ' ಸಿನಿಮಾ ವೇಣುಗೋಪಾಲ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟ ಸಿನಿಮಾವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com