ಚಿತ್ರೀಕರಣದ ವೇಳೆ ಅನಾರೋಗ್ಯ: ನಟ ಶರಣ್ ಆಸ್ಪತ್ರೆಗೆ ದಾಖಲು

ಚಿತ್ರೀಕರಣದ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾದ ನಟ ಶರಣ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
ಶರಣ್
ಶರಣ್
Updated on

ಬೆಂಗಳೂರು: ಚಿತ್ರೀಕರಣದ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾದ ನಟ ಶರಣ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ನಿರ್ದೇಶಕ ಸಿಂಪಲ್ ಸುನಿ ನಿರ್ದೇಶನದ ಅವತಾರ ಪುರುಷ ಚಿತ್ರದ ಚಿತ್ರೀಕರಣ ಹೆಚ್ ಎಂಟಿ ಗ್ರೌಂಡ್ ನಲ್ಲಿ ನಡೆಯುತ್ತಿತ್ತು. ಈ ವೇಳೆ ಶರಣ್ ಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಆಶಿಕಾ-ಶರಣ್
ಆಶಿಕಾ-ಶರಣ್

ನಗರದ ಮಲ್ಲಿಗೆ ಆಸ್ಪತ್ರೆಯಲ್ಲಿ ಶರಣ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವತಾರ ಪುರುಷ ಚಿತ್ರದಲ್ಲಿ ಶರಣ್ ಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದು ಸುನಿ ನಿರ್ದೇಶನ ಮಾಡುತ್ತಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com