ಕೊರೋನಾ ಎಫೆಕ್ಟ್: ನಿಖಿಲ್-ರೇವತಿ ವಿವಾಹ ಸರಳವಾಗಿ ಮನೆಯಲ್ಲಿಯೇ ನೆರವೇರಿಸಲು ಕುಮಾರಸ್ವಾಮಿ ನಿರ್ಧಾರ!

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರ್ ಮದುವೆಯನ್ನು ಅದ್ಧೂರಿಯಾಗಿ ನೆರವೇರಿಸಲು ಮುಂದಾಗಿದ್ದರೂ ಆದರೆ ಕೊರೋನಾ ಎಫೆಕ್ಟ್ ನಿಂದಾಗಿ ಸರಳ ಮದುವೆಗೆ ಇದೀಗ ನಿರ್ಧರಿಸಿದ್ದಾರೆ. 
ನಿಖಿಲ್-ರೇವತಿ
ನಿಖಿಲ್-ರೇವತಿ

ಬೆಂಗಳೂರು: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರ್ ಮದುವೆಯನ್ನು ಅದ್ಧೂರಿಯಾಗಿ ನೆರವೇರಿಸಲು ಮುಂದಾಗಿದ್ದರೂ ಆದರೆ ಕೊರೋನಾ ಎಫೆಕ್ಟ್ ನಿಂದಾಗಿ ಸರಳ ಮದುವೆಗೆ ಇದೀಗ ನಿರ್ಧರಿಸಿದ್ದಾರೆ.

ಏಪ್ರಿಲ್ 17ರಂದು ನಿಖಿಲ್ ಕುಮಾರ್ ಮತ್ತು ರೇವತಿ ಮದುವೆ ನಿಶ್ಚಯವಾಗಿತ್ತು. ಇದಕ್ಕಾಗಿ ಚೆನ್ನಪಟ್ಟಣದ ಜಾನಪದ ಲೋಕದಲ್ಲಿ ಅದ್ಧೂರಿಯಾಗಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದರು. ಅಲ್ಲದೆ ಅದ್ಧೂರಿ ಸೆಟ್ ಹಾಕಲು ಗುದ್ದಲಿ ಪೂಜೆಯನ್ನು ಮಾಡಲಾಗಿತ್ತು. ಇನ್ನು 8 ಲಕ್ಷ ಆಹ್ವಾನ ಪತ್ರಿಕೆಯನ್ನು ಸಿದ್ಧಪಡಿಸಲಾಗಿತ್ತು. 

ಕೊರೋನಾ ಎಫೆಕ್ಟ್ ನಿಂದಾಗಿ ದೇಶವೇ ಲಾಕ್ ಡೌನ್ ಆಗಿದೆ. ಜೊತೆಗೆ ಮದುವೆ, ಜಾತ್ರೆ, ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದರಿಂದ ಇದೀಗ ಮನೆಯಲ್ಲಿಯೇ ಮದುವೆ ಮಾಡಲು ನಿರ್ಧರಿಸಿರುವುದಾಗಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com