ಬೆಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ.
ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು
ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್,
ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ಸುದೀಪ್ ಅವರನ್ನು ಹೃದಯ ಪೂರ್ವಕವಾಗಿ ಅಭಿನಂದಿಸುವುದಾಗಿ ಸಚಿವ ಸುಧಾಕರ್ ಹೇಳಿದ್ದಾರೆ.
Advertisement