ನಟ ದರ್ಶನ್ ಹುಟ್ಟುಹಬ್ಬದ ಆಯೋಜಕರ ವಿರುದ್ಧ ದೂರು: ಕಾರಣ ಏನು ಗೊತ್ತಾ?

ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟು ಹಬ್ಬ ಆಯೋಜಕರು ಹಾಗೂ ಅಭಿಮಾನಿಗಳ ವಿರುದ್ಧ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಟ ದರ್ಶನ್
ನಟ ದರ್ಶನ್

ಬೆಂಗಳೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟು ಹಬ್ಬ ಆಯೋಜಕರು ಹಾಗೂ ಅಭಿಮಾನಿಗಳ ವಿರುದ್ಧ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದರ್ಶನ್ ಮನೆ ಪಕ್ಕದ ನಿವಾಸಿ ರಾಮಪ್ರಸಾದ್ ಎಂ.ಎಸ್​ ಎಂಬುವವರು ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ದರ್ಶನ್  ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಫೆ 15ರಂದು ಅವರ ನಿವಾಸದ ಎದುರು ನೆರೆದಿದ್ದ ಅಭಿಮಾನಿಗಳು ತಮ್ಮ ಕೆಎ-02 ಎಂಎನ್​ 1396 ಸಂಖ್ಯೆಯ ಕಾರು ಜಖಂಗೊಳಿಸಿದ್ದು, 40  ಸಾವಿರ ಮೌಲ್ಯದಷ್ಟು ಹಾನಿಯಾಗಿದೆ

ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಇರುವುದು ಈ ಘಟನೆಗೆ  ಕಾರಣವಾಗಿದೆ ಎಂದು ಆರೋಪಿಸಿ,  ದರ್ಶನ ಅಭಿಮಾನಿ, ಆಯೋಜಕರ ವಿರುದ್ಧ ಕಾನೂನು ಕ್ರಮ  ಕೈಗೊಳ್ಳಬೇಕು ಎಂದು ಅವರು ದೂರು ನೀಡಿದ್ದಾರೆ.ದೂರು ಸ್ವೀಕರಿಸಿ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com