ಬೆಂಗಳೂರು: ಉಡುಪಿಯ ರಾಕೇಶ್ ಪೂಜಾರಿ ಅವರು ಜ಼ೀ ಕನ್ನಡ ವಾಹಿನಿಯ ಜನಪ್ರಿಯ ಹಾಸ್ಯ ಕಾರ್ಯಕ್ರಮ ‘ಕಾಮಿಡಿ ಕಿಲಾಡಿಗಳು 3’ರ ವಿನ್ನರ್ ಪಟ್ಟ ಗಿಟ್ಟಿಸಿದ್ದು, ಸಂತೋಷ್ ಅವರು ರನ್ನರ್ ಅಪ್ ಆಗಿದ್ದಾರೆ.
ಇಂದು ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ನಟ ಜಗ್ಗೇಶ್ ಅವರು ಕಾಮಿಡಿ ಕಿಲಾಡಿಗಳು ಸೀಸನ್ 3 ರ ವಿನ್ನರ್ ಮತ್ತು ರನ್ನರ್ ಅಪ್ ಗಳನ್ನು ಘೋಷಿಸಿದರು. ಜೀ ಕನ್ನಡವತಿಯಿಂದ ವಿನ್ನರ್ 8 ಲಕ್ಷ ರೂಪಾಯಿ ಹಾಗೂ ರನ್ನರ್ ಅಪ್ ಗೆ 4 ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗಿದೆ.
ಕೋಳಿ ಕಳ್ಳ ಖ್ಯಾತಿಯ ಮನೋಹರ್ ಹಾಗೂ ಬಾ ಮಲಿಕೋ ಖ್ಯಾತಿಯ ದಾನಪ್ಪ ಅವರು ಎರಡನೇ ರನ್ನರ್ ಅಪ್ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ಈ ಮೂಲಕ 15 ಸ್ಪರ್ಧಿಗಳು ತೀವ್ರ ಪೈಪೋಟಿ ನೀಡುತ್ತ, 26 ವಾರಗಳು ಕಾಲ ನಡೆದ ಈ ಕಾರ್ಯಕ್ರಮಕ್ಕೆ ಅದ್ದೂರಿ ತೆರೆ ಬಿದ್ದಿದೆ. 50 ಸಾವಿರಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಫಿನಾಲೆ ನಡೆಯಿತು. ಹಲವು ವಿಶೇಷಗಳಿಂದ ಕೂಡಿದ ಕಾಮಿಡಿ ಕಿಲಾಡಿಗಳು ಸೀಜ಼ನ್-3ರ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಶನಿವಾರ ಸಂಜೆ 6 ರಿಂದ ಜ಼ೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿದೆ.
Advertisement