ನವದೆಹಲಿ: ಜೆಎನ್ಯು ಹಿಂಸಾಚಾರ ಘಟನೆ ಬೆನ್ನಲ್ಲೇ ದೀಪಿಕಾ ಪಡುಕೋಣೆ ವಿದ್ಯಾರ್ಥಿಗಳನ್ನು ಭೇಟಿಯಾದ ಪ್ರಕರಣ ನಟಿ ಕಂಗನಾ ರಾಣಾವತ್ ಪ್ರತಿಕ್ರಿಯಿಸಿದ್ಧಾರೆ.
ದೀಪಿಕಾ ಹೋಗಿದ್ದು ಅವರ ವೈಯಕ್ತಿಕ ವಿಚಾರ.ಆದರೆ, ನಾನಂತೂ ತುಕಡೆ ಗ್ಯಾಂಗ್ ಜೊತೆ ಹೋಗಿ ನಿಲ್ಲಲಾರೆ ಎಂದು ಕಂಗನಾ ಸ್ಪಷ್ಟಪಡಿಸಿದ್ದಾರೆ. ಸ್ಪಾಟ್ ಬೋಯೆ ಎಂಬ ಜಾಲತಾಣದ ಜೊತೆಗಿನ ಸಂದರ್ಶನದಲ್ಲಿ ಕಂಗನಾ ಅವರು, ದೇಶ ಒಡೆಯುವವರನ್ನು ತಾನು ಯಾವತ್ತೂ ಬೆಂಬಲಿಸುವುದಿಲ್ಲ ಎಂದು ಹೇಳಿದ್ಧಾರೆ.
ಏನೇ ಆದರೂ ನಾನು ತುಕಡೆ ಗ್ಯಾಂಗ್ ಜೊತೆ ಹೋಗಿ ನಿಲ್ಲಲಾರೆ. ಈ ದೇಶವನ್ನು ವಿಭಜಿಸುವ ಯಾರನ್ನೇ ಆದರೂ ನಾನು ಬೆಂಬಲಿಸುವುದಿಲ್ಲ. ಯೋಧ ಸತ್ತಾಗ ಸಂಭ್ರಮಿಸುವ ಜನರಿಗೆ ಅಧಿಕಾರ ಸಿಗಬೇಕೆಂದು ನಾನು ಇಚ್ಛಿಸುವುದಿಲ್ಲ. ಅವರಲ್ಲಿ ಗುರುತಿಸಿಕೊಳ್ಳಲು ಬಯಸುವುದಿಲ್ಲ” ಎಂದು ಬಾಲಿವುಡ್ ಸ್ಟಾರ್ ನಟಿ ಕಂಗನಾ ತಿಳಿಸಿದ್ಧಾರೆ.
ದೀಪಿಕಾ ವೈಯಕ್ತಿಕ ನಿಲುವಿನ ಬಗ್ಗೆ ತಾನು ಮಾತನಾಡುವುದು ಸರಿಯಾಗದು. ನನಗೆ ಏನು ಬೇಕು ಎಂದು ನಾನು ಹೇಳಬಲ್ಲೆ. ಆಕೆ ಏನು ಮಾಡಬೇಕೆಂದು ನಾನು ಹೇಳುವುದಿಲ್ಲ ಎಂದಿದ್ಧಾರೆ.
Advertisement