'ಕೃಷ್ಣಲೀಲಾ' ನಟಿ ಮಯೂರಿಗೆ ಕಂಕಣ ಭಾಗ್ಯ: ಹಸೆಮಣೆ ಏರುತ್ತಿದ್ದಾರೆ ಮುದ್ದು ಮುಖದ ಸುಂದರಿ

ಕೃಷ್ಣ ಲೀಲಾ’ ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಸೌಂಡ್ ಮಾಡಿದ ನಟಿ ಮಯೂರಿ ಕ್ಯಾತರಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ನಟಿ ಮಯೂರಿ
ನಟಿ ಮಯೂರಿ

ಬೆಂಗಳೂರು: ‘ಕೃಷ್ಣ ಲೀಲಾ’ ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಸೌಂಡ್ ಮಾಡಿದ ನಟಿ ಮಯೂರಿ ಕ್ಯಾತರಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿಯೋದಕ್ಕೆ ನಟಿ ಮಯೂರಿ ಸಜ್ಜಾಗಿದ್ದಾರೆ. ಭರ್ತಿ 10 ವರ್ಷಗಳಿಂದ ಪ್ರೀತಿಯಲ್ಲಿ ಬಂಧಿಯಾಗಿರುವ ಮಯೂರಿ ಹಾಗೂ ಅರುಣ್, ಮನೆಯವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಅಡಿಯಿಡಲು ರೆಡಿಯಾಗಿದ್ದಾರೆ. 

ಶುಕ್ರವಾರ ಮಯೂರಿ ಮದುವೆ ನಡೆಯಲಿದ್ದು, ಕುಟುಂಬಸ್ಥರು-ಆಪ್ತರು ಭಾಗಿಯಾಗಲಿದ್ದಾರೆ. ದೇವಸ್ತಾನದಲ್ಲಿ ಕೃಷ್ಣಲೀಲಾ ಸುಂದರಿಯ ಮದುವೆ ನೆರವೇರುತ್ತಿದೆ. ‘ಕೃಷ್ಣ ಲೀಲಾ’ ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಸೌಂಡ್ ಮಾಡಿದ ನಟಿ ಮಯೂರಿ ಕ್ಯಾತರಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ನಟಿ ಮಯೂರಿ ಬಹುಕಾಲದ ಗೆಳೆಯ ಅರುಣ್ ಜೊತೆ ಹಸೆಮಣೆ ಏರುತ್ತಿದ್ದಾರೆ. ಅರುಣ್ ಮತ್ತು ಮಯೂರಿ ಅವರದ್ದು ಸುಮಾರು ಹತ್ತು ವರ್ಷಗಳ ಗೆಳೆತನ. ಇಬ್ಬರು ೧೦ ವರ್ಷಗಳಿಂದ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೆ ಪೋಷಕರು ಅಸ್ತು ಎಂದಿದ್ದಾರೆ.

ಮಯೂರಿ ಅವರು ‘ಅಶ್ವಿನಿ ನಕ್ಷತ್ರ’ ಕಿರುತೆರೆ ಪ್ರವೇಶಿಸಿ, ಬಳಿಕ ‘ಕೃಷ್ಣ ಲೀಲಾ’ ಸಿನಿಮಾದ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟವರು. ‘ಇಷ್ಟಕಾಮ್ಯ’, ‘ರುಸ್ತುಂ’ನಂತಹ ಭಿನ್ನ ಬಗೆಯ ಸಿನಿಮಾಗಳಲ್ಲಿ ನಟಿಸಿದ ನಂತರ, ಮಯೂರಿ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’, ‘ಮೌನಂ’ ಚಿತ್ರಗಳಲ್ಲಿ ವಿಭಿನ್ನ ಪಾತ್ರದಲ್ಲಿ ಮಿಂಚಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com