ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ದಿವಂಗತ ಹಿರಿಯ ನಟ ಹಾಗೂ ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಷ್ ಅವರ ಎರಡನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಅವರು ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿ ಸ್ಮರಿಸಿಕೊಂಡರು.
ಸಂಸದೆ ಹಾಗೂ ಅವರ ಪತ್ನಿ ಸುಮಲತಾ ಅಂಬರೀಷ್, ಪುತ್ರ ಅಭಿಷೇಕ್, ನಟ ದರ್ಶನ್, ರಾಕ್ ಲೈನ್ ವೆಂಕಟೇಶ್ ಅವರೆಲ್ಲಾ ಸೇರಿ ಕಂಠೀರವ ಸ್ಡುಡಿಯೊದಲ್ಲಿರುವ ಸಮಾಧಿ ಬಳಿ ತೆರಳಿ ಅಂಬರೀಷ್ ಅವರಿಗೆ ಇಷ್ಟವಾದ ತಿಂಡಿ-ತಿನಿಸುಗಳನ್ನಿಟ್ಟು ಭಕ್ತಿಯಿಂದ ಪೂಜಿಸಿದರು.
ಇವರ ಜೊತೆಗೆ ನಟರಾದ ದರ್ಶನ್, ಜೈ ಜಗದೀಶ್, ವಿಜಯ ಲಕ್ಷ್ಮಿ ಸಿಂಗ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಿತ್ರರಂಗದ ಹಲವರಿದ್ದರು.
Advertisement