ಚೆನ್ನೈ: ಗಾನ ಗಂಧರ್ವ ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೋನಾ ವಕ್ಕರಿಸಿದ ನಂತರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಬೇಗ ಚೇತರಿಸಿಕೊಳ್ಳಲು ಇಡೀ ದೇಶ ಪ್ರಾರ್ಥಿಸುತ್ತಿದೆ.
ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಕುರಿತಂತೆ ಪುತ್ರ ಚರಣ್ ದಿನಂ ಪ್ರತಿ ಹೆಲ್ತ್ ಅಪ್ ಡೇಟ್ ಮಾಡುತ್ತಿದ್ದಾರೆ. ಇದೀಗ ಚರಣ್ ಅವರು ನಮ್ಮ ತಂದೆ ಆರೋಗ್ಯ ಸ್ಥಿರವಾಗಿದೆ. ಈ ವಾರಂತ್ಯ ಅಥವಾ ಸೋಮವಾರದ ಹೊತ್ತಿಗೆ ಸಿಹಿ ಸುದ್ದಿ ಸಿಗಲಿದೆ ಎಂದು ತಾವು ನಂಬಿರುವುದಾಗಿ ಹೇಳಿದ್ದಾರೆ.
ದೇವರ ಆಶೀರ್ವಾದ ಮತ್ತು ನಿಮ್ಮೆಲ್ಲರ ಪ್ರಾರ್ಥನೆಯಿಂದಾಗಿ ಸೋಮವಾರ ಒಂದು ಶುಭ ಸುದ್ದಿ ಸಿಗಲಿದೆ ಎಂದು ನಂಬಿದ್ದೇನೆ ಎಂದು ವಿಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ. ಈ ಕಂಡ ಅಭಿಮಾನಿಗಳು ಕೊಂಚ ನಿರಾಳರಾಗಿದ್ದಾರೆ.
74 ವರ್ಷದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಸತತ 28 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಅವರು ಬಹುಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
Advertisement