ಚೆನ್ನೈ: ತಮಿಳು ನಟ ವಿಶಾಲ್, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಬಾಲಿವುಡ್ ನಟಿ ಕಂಗನಾ ರಣಾವತ್ರನ್ನು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹೋಲಿಸಿ ಟ್ವೀಟ್ ಮಾಡಿದ್ದಾರೆ.
ನಿಮ್ಮ ದಿಟ್ಟತನಕ್ಕೊಂದು ಹ್ಯಾಟ್ಸ್ ಆಫ್, ಯಾವುದು ತಪ್ಪು ಮತ್ತು ಯಾವುದು ಸರಿ ಎನ್ನುವ ವಿಚಾರದಲ್ಲಿ ಧ್ವನಿಯೆತ್ತಲು ನೀವು ಯಾವತ್ತೂ ಎರಡು ಬಾರಿ ಯೋಚಿಸಿಯೇ ಇಲ್ಲ. ಇದು ನಿಮ್ಮ ವೈಯಕ್ತಿಕ ಸಮಸ್ಯೆಯಲ್ಲ, ಸರ್ಕಾರವೇ ನಿಮ್ಮ ವಿರುದ್ಧವಾಗಿದ್ದರೂ ನೀವು ಕುಗ್ಗದೇ ಗಟ್ಟಿಯಾಗಿ ಉಳಿಯುವ ಮೂಲಕ ಒಂದು ದೊಡ್ಡ ಉದಾಹರಣೆಯಾಗಿ ನಿಂತಿದ್ದೀರಿ. ಇದು 1920ರ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹೋಲುವಂತಿದೆ.
ಯಾವುದು ಸರಿಯಿಲ್ಲ ಎಂದು ಕಂಡುಬಂದಾಗ ಸರ್ಕಾರದ ವಿರುದ್ಧ ಧ್ವನಿ ಏರಿಸಲು ನೀವು ಉದಾಹರಣೆಯೊಂದನ್ನು ಸ್ಥಾಪಿಸಿದ್ದೀರಿ ಮತ್ತು ಸರ್ಕಾರದ ವಿರುದ್ಧ ಧ್ವನಿಯೇರಿಸಲು ಸೆಲೆಬ್ರಿಟಿಯೇ ಆಗಿರಬೇಕಂತಲ್ಲ. ಅದು ಸಾಮಾನ್ಯ ವ್ಯಕ್ತಿಯು ಆಗಿರಬೇಕು. ಈ ವಿಚಾರದಲ್ಲಿ ನಾನು ನಿಮಗೆ ನಮಸ್ಕರಿಸುತ್ತೇನೆಂದು ವಿಶಾಲ್, ಕಂಗನಾಗೆ ಪೋಸ್ಟ್ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ನಟ ವಿಶಾಲ್ ತಮಿಳುನಾಡಿನಲ್ಲಿ ನಡೆಯುವ ಪ್ರಸಿದ್ಧ ಜಲ್ಲಿಕಟ್ಟು ಕ್ರೀಡೆಗೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು.
ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಜೀವನ ಕಥೆ ಆಧಾರಿತ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
Advertisement