ಸುಳ್ಳು ಸುದ್ದಿ ಹಬ್ಬಿಸಬೇಡಿ: ಮೊದಲ ಬಾರಿಗೆ ಮೌನ ಮುರಿದ ಮೇಘನ ರಾಜ್

ಎರಡು ಗಂಡು ಮಗು ಜೊತೆ ಮೇಘನಾ-ಧ್ರುವ ಸರ್ಜಾ, ಮಗು ಹಿಡಿದು ಕಣ್ಣೀರು ಹಾಕಿ ಧ್ರುವ,ಮೇಘನಾ ಪರಿಸ್ಥಿತಿ ಏನಾಗಿದೆ..? ಎಂದು ಇತ್ತೀಚೆಗೆ ಕೆಲ ಯೂಟ್ಯೂಬ್ ಚಾನಲ್‍ಗಳಲ್ಲಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿತ್ತು.
ಮೇಘನಾ ರಾಜ್
ಮೇಘನಾ ರಾಜ್

ಬೆಂಗಳೂರು: ಎರಡು ಗಂಡು ಮಗು ಜೊತೆ ಮೇಘನಾ-ಧ್ರುವ ಸರ್ಜಾ, ಮಗು ಹಿಡಿದು ಕಣ್ಣೀರು ಹಾಕಿ ಧ್ರುವ, ಮೇಘನಾ ಪರಿಸ್ಥಿತಿ ಏನಾಗಿದೆ..? ಎಂದು ಇತ್ತೀಚೆಗೆ ಕೆಲ ಯೂಟ್ಯೂಬ್ ಚಾನಲ್‍ಗಳಲ್ಲಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿತ್ತು. ಆ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ನಟಿ ಮೇಘನಾ ರಾಜ್ ಸುಳ್ಳು ಸುದ್ದಿಗಳ ವಿರುದ್ಧ ಕಿಡಿಕಾರಿದ್ದಾರೆ.

ಸತ್ಯ ಏನೆಂದು ತಿಳಿದುಕೊಳ್ಳದೆ ಕೆಲವರು ಹೆಚ್ಚಿನ ವೀಕ್ಷಕರು ಮತ್ತು ಅಧಿಕ ವೀಕ್ಷಣೆ ಪಡೆದುಕೊಳ್ಳಲು ಈ ರೀತಿ ಹೇಳುತ್ತಿದ್ದಾರೆ. ಹಾಗೇನಾದರೂ ನನ್ನ ಹಾಗೂ ನನ್ನ ಕುಟುಂಬದ ಸದಸ್ಯರಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ನಾವೇ ನೇರವಾಗಿ ನೀಡುತ್ತೇವೆ. ಇಂತಹ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಮೇಘನಾ ರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಕುರಿತು ಇನ್ಸ್ಟಾಗ್ರಾಂನಲ್ಲಿ ತಮ್ಮ ಅಭಿಮಾನಿಗಳು ಮನವಿ ಮಾಡಿರುವ ಅವರು, ನನ್ನ ಹಾಗೂ ನನ್ನ ಕುಟುಂಬ ಕುರಿತಾದ ಗಾಳಿ ಸುದ್ದಿಗಳನ್ನು ನಂಬಬೇಡಿ. ಈ ಕುರಿತು ಅಧಿಕೃತ ಪ್ರಕಟಣೆಯನ್ನು ನಾವೇ ನೀಡುತ್ತೇವೆ. ಕೆಲವು ಸಾಮಾಜಿಕ ಜಾಲತಾಣಗಳು  ಅವರ ಲಾಭಾಕ್ಕಾಗಿ ನಮ್ಮನ್ನು ಬಳಸುತ್ತಿದ್ದಾರೆ. ಈ ಬಗ್ಗೆ ಶೀಘ್ರದಲ್ಲಿಯೇ ನಿಮ್ಮ ಮುಂದೆ ಬಂದು ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆಯೆಲ್ಲಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಕ್ರಿಯಾಶೀಲರಾಗಿದ್ದ ಮೇಘನಾ, ಚಿರು ಅಗಲಿಕೆ ಬಳಿಕ ದೂರ ಉಳಿದಿದ್ದಾರೆ. ಚಿರು ಸಾವಿನ ಸಂದರ್ಭದಲ್ಲಿ ನಾಡಿನ ಜನರು ತೋರಿದ ಪ್ರೀತಿ ಕುರಿತು ಧನ್ಯವಾದ ತಿಳಿಸಿದ್ದರು. ಬಳಿಕ ಒಂದೆರಡು ಸೀಮಿತ ಪೋಸ್ಟ್​ಗಳನ್ನು ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com