ದರಿದ್ರ ದೇಶ ಚೀನಾ ಮಟ್ಟಹಾಕಿ, ಮೂಲೆಗುಂಪು ಮಾಡಬೇಕು: ಎಸ್ ಪಿಬಿ ನಿಧನಕ್ಕೆ ಜಗ್ಗೇಶ್ ಕಂಬನಿ

ತಮ್ಮ ಸಿರಿಕಂಠದ ಮೂಲಕ ನಮ್ಮನ್ನು ರಂಜಿಸಿದ್ದ ಗಾನಚೇತನ ತಮ್ಮ ಗಾಯನವನ್ನು ನಿಲ್ಲಿಸಿದ್ದಾರೆ. ಹಲವಾರು ನಟರು ಮತ್ತು ಚಿತ್ರರಂಗದವರು ಅವರಿಗೆ ಸಂತಾಪ ಸೂಚಿಸಿದ್ದಾರೆ.
ಎಸ್ ಪಿ ಬಾಲಸುಬ್ರಮಣ್ಯಂ
ಎಸ್ ಪಿ ಬಾಲಸುಬ್ರಮಣ್ಯಂ

ಬೆಂಗಳೂರು: ತಮ್ಮ ಸಿರಿಕಂಠದ ಮೂಲಕ ನಮ್ಮನ್ನು ರಂಜಿಸಿದ್ದ ಗಾನಚೇತನ ತಮ್ಮ ಗಾಯನವನ್ನು ನಿಲ್ಲಿಸಿದ್ದಾರೆ. ಹಲವಾರು ನಟರು ಮತ್ತು ಚಿತ್ರರಂಗದವರು ಅವರಿಗೆ ಸಂತಾಪ ಸೂಚಿಸಿದ್ದಾರೆ.

ಎಸ್ ಪಿ ಬಿ ನಿಧನದ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಟ್ವೀಟ್ ಮಾಡಿದ್ದು, ಯಾರ ಕಣ್ಣು ತಾಕಿತು. ಯಾವ ತಪ್ಪಿಗೆ ಈ ಶಿಕ್ಷೆ. ಇನ್ನು ಎಷ್ಟು ಸಾಧಕರು ಈ ಸಾವಿನ ಶಿಕ್ಷೆಗೆ ಸಾಲು ನಿಂತಿಹರು. ವಿಶ್ವಶಾಂತಿ ಭಂಗಕ್ಕೆ ಕೊರೋನಾ ಹರಡಿ ಮಳ್ಳಿಯಂತ ದರಿದ್ರ ದೇಶ. ಚೀನವನ್ನು ವಿಶ್ವದ ಕಾಳಜಿ ಇರುವ ಇತರ ರಾಷ್ಟ್ರಗಳು ಮಟ್ಟಹಾಕಿ ಮೂಲೆಗುಂಪು ಮಾಡಬೇಕು. ನನ್ನ ನೆಚ್ಚಿನ ಹೃದಯವನ್ನು ಈ ರೀತಿ ಕಳೆದುಕೊಳ್ಳುವೆ ಎನಿಸಲಿಲ್ಲ ಓಂಶಾಂತಿ. ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಜಗ್ಗೇಶ್​ ರವರು ಗೌರವಾನ್ವಿತ ವಿದಾಯ.. ನಿಮ್ಮಧ್ವನಿ ತಮ್ಮದಾಗಿಸಿ ನಟಿಸಿ ಚಪ್ಪಾಳೆ ಪಡೆದ ಅದೃಷ್ಟವಂತ ನಟರ ಸಾಲಲ್ಲಿ ನಾನು ಒಬ್ಬ.. ನೀವು ಕಾಯಕದಲ್ಲಿ ಗಾಯಕ ಆದರೆ ನಿಮ್ಮಲ್ಲಿ ಒಬ್ಬ ಮಾತೃಹೃದಯದ ಭಾವನಾಜೀವಿ ಇದ್ದ. ಮದ್ರಾಸ್ ನಲ್ಲಿ ನಿಮ್ಮಜೊತೆ ಕಳೆದ ಆ ದಿನಗಳು ಮತ್ತೆ ಬರದು. ಮರೆಯಲಾಗದು. ಹೋದಿರಿ ಮತ್ತೆ ಬೇಗ ಬನ್ನಿ ಎಂದಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com