ನಟ ಸುದೀಪ್ ಗೆ ಅನಾರೋಗ್ಯ; ವಿಶ್ರಾಂತಿಗೆ ವೈದ್ಯರ ಸಲಹೆ

ನಟ, ನಿರ್ದೇಶಕ ಹಾಗೂ ನಿರೂಪಕ ಕಿಚ್ಚ ಸುದೀಪ್ ಅನಾರೋಗ್ಯಕ್ಕೀಡಾಗಿದ್ದು, ಸ್ವತಃ ಅವರೇ ಈ ಕುರಿತು ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. 
ಸುದೀಪ್
ಸುದೀಪ್
Updated on

ನಟ, ನಿರ್ದೇಶಕ ಹಾಗೂ ನಿರೂಪಕ ಕಿಚ್ಚ ಸುದೀಪ್ ಅನಾರೋಗ್ಯಕ್ಕೀಡಾಗಿದ್ದು, ಸ್ವತಃ ಅವರೇ ಈ ಕುರಿತು ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. 

ಅನಾರೋಗ್ಯದಿಂದ ಬಳಲುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರಾದರೂ, ನಿಖರವಾಗಿ ಏನಾಗಿದೆ ಎಂಬುದರ ಬಗ್ಗೆ ತಿಳಿಸಿಲ್ಲ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿರುವುದಾಗಿ ಹೇಳಿದ್ದಾರೆ.

ಹುಷಾರಿಲ್ಲ, ಈ ವೀಕೆಂಡ್‌ನೊಳಗೆ ಚೇತರಿಸಿಕೊಳ್ಳುತ್ತೇನೆ ಎಂದು ಕೊಂಡಿದ್ದೆ. ಆದರೆ ನನ್ನ ವೈದ್ಯರ ಸಲಹೆ ಪ್ರಕಾರ ಇನ್ನೂ ಒಂದು ವಾರ ವಿಶ್ರಾಂತಿ ತೆಗೆದು ಕೊಳ್ಳಬೇಕಿದೆ.  ಈ ಕಾರಣಕ್ಕೆ ಬಿಗ್ ಬಾಸ್‌ ಈ ವಾರ ಎಪಿಸೋಡ್‌ನಲ್ಲಿ ನಾನಿರುವುದಿಲ್ಲ. ಬಿಗ್ ಬಾಸ್‌ ಕ್ರಿಯೇಟಿವ್ ತಂಡ ಈ ವಾರದ ಎಲಿಮಿನೇಷನ್‌ಗೆ ಏನು ಪ್ಲಾನ್ ಮಾಡಿದೆ ಎಂಬ ಬಗ್ಗೆ ನನಗೆ ಕುತೂಹಲವಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com