ಮಧುರ ಪ್ರೇಮಕಥೆಗಾಗಿ ಒಂದಾಗುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ- ಶಿವ ತೇಜಸ್

ಹಲವು ಸಿನಿಮಾಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟ ಕೃಷ್ಣ ನಿರ್ದೇಶಕ ಶಿವ ತೇಜಸ್ ಅವರ ರೋಮ್ಯಾಂಟಿಕ್ ಪ್ರೇಮಕಥೆಯಲ್ಲಿ ನಟಿಸುತ್ತಿದ್ದಾರೆ.
ಕೃಷ್ಣ
ಕೃಷ್ಣ
Updated on

ಹಲವು ಸಿನಿಮಾಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟ ಕೃಷ್ಣ ನಿರ್ದೇಶಕ ಶಿವ ತೇಜಸ್ ಅವರ ರೋಮ್ಯಾಂಟಿಕ್ ಪ್ರೇಮಕಥೆಯಲ್ಲಿ ನಟಿಸುತ್ತಿದ್ದಾರೆ.

ಮಳೆ, ಧೈರ್ಯಂ ಮತ್ತು ಶಿವಾರ್ಜುನ ಸಿನಿಮಾಗಳನ್ನು ನಿರ್ದೇಶಿಸಿರುವ ಶಿವ ತೇಜಸ್ ಜೊತೆ ಲವ್ ಮಾಕ್ಟೇಲ್ ಹೀರೋ ಜೊತೆಯಾಗಲಿದ್ದಾರೆ. 

ಸುಮಂತ್ ಕ್ರಾಂತಿ ಅವರ ರಶ್ಮಿ ಫಿಲ್ಮ್ಸ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ, ಆಗಸ್ಟ್ 27 ರಂದು ಸ್ಕ್ರಿಪ್ಟ್ ಪೂಜೆ ನಡೆಸಲು ಚಿತ್ರತಂಡ ಸಿದ್ಧತೆ ನಡೆಸಿದೆ. ನವೆಂಬರ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು  ಕಲಾವಿದರ ಆಯ್ಕೆ ಅಂತಿಮವಾಗಲಿದೆ.

ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಇದೇ ವೇಳೆ ಹಲವು ದಿನಗಳಿಂದ ವಿಶ್ರಾಂತಿಯಲ್ಲಿದ್ದ ಕೃಷ್ಣ ಆಗಸ್ಟ್ 27 ರಿಂದ ಬ್ಯಾಚಲರ್ ಸಿನಿಮಾ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.

ಇದಾದ ನಂತರ ರಚಿತಾ ರಾಮ್ ನಟನೆಯ ಲವ್ ಮಿ ಆರ್ ಹೇಟ್ ಮಿ ಹಾಗೂ ಶುಗರ್ ಫ್ಯಾಕ್ಟರಿ ಸಿನಿಮಾ ಶೂಟಿಂಗ್ ನಲ್ಲಿ ಪಾಲ್ಗೋಳ್ಳಲಿದ್ದಾರೆ.  ಇದರ ಜೊತೆಗೆ ಲವ್ ಮಾಕ್ಟೇಲ್ 2 ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com