ಎಆರ್ ರೆಹಮಾನ್ ಯಾರೆಂದು ಗೊತ್ತಿಲ್ಲ, 'ಭಾರತ ರತ್ನ' ನನ್ನಪ್ಪನ ಕಾಲ್ಬೆರಳಿಗೆ ಸಮ: ನಂದಮೂರಿ ಬಾಲಕೃಷ್ಣ ಹೇಳಿಕೆ

ತೆಲುಗು ಹಿರಿಯ ನಟ ಮತ್ತು ರಾಜಕಾರಣಿ ನಂದಮೂರಿ ಬಾಲಕೃಷ್ಣ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. 
ನಂದಮೂರಿ ಬಾಲಕೃಷ್ಣ
ನಂದಮೂರಿ ಬಾಲಕೃಷ್ಣ
Updated on

ಹೈದರಾಬಾದ್: ತೆಲುಗು ಹಿರಿಯ ನಟ ಮತ್ತು ರಾಜಕಾರಣಿ ನಂದಮೂರಿ ಬಾಲಕೃಷ್ಣ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. 

ಆಸ್ಕರ್ ಪ್ರಶಸ್ಕಿ ಪುರಸ್ಕೃತ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್  ಯಾರೆಂದೇ ಗೊತ್ತಿಲ್ಲ ಎಂದು ಹೇಳಿರುವ ನಂದಮೂರಿ ಬಾಲಕೃಷ್ಣ ಭಾರತ ರತ್ನ ಪ್ರಶಸ್ತಿ ತನ್ನ ತಂದೆ ಎನ್ ಟಿ ರಾಮರಾವ್ ಅವರ ಕಾಲ್ಬೆರಳಿಗೆ ಸಮ ಎಂದು ಹೇಳಿದ್ದಾರೆ.

ತೆಲುಗು ಚಾನೆಲ್ ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ನಂದಮೂರಿ ಬಾಲಕೃಷ್ಣ  ಎ.ಆರ್. ರೆಹಮಾನ್ ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ನಂದಮೂರಿ ಬಾಲಕೃಷ್ಣ, ಎ.ಆರ್. ರೆಹಮಾನ್ ಯಾರು ಎಂಬುದೇ ನನಗೆ ಗೊತ್ತಿಲ್ಲ. ಅವರು ಆಸ್ಕರ್ ಪ್ರಶಸ್ತಿ ಪಡೆದಿದ್ದಾರೆಂದು ಕೇಳಿದ್ದೇನೆ. ಆದರೆ, ನನಗಿನ್ನೂ ಅವರು ಯಾರೆಂದೇ ಗೊತ್ತಾಗಿಲ್ಲ. ರೆಹಮಾನ್ ಎಲ್ಲೋ ಹತ್ತು ವರ್ಷಕ್ಕೊಂದು ಹಿಟ್ ಗೀತೆಯನ್ನು ಕೊಡುತ್ತಾರೆ ಅಷ್ಟೇ ಎನ್ನುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ನಟ ಬಾಲಕೃಷ್ಣ.

ಇದಿಷ್ಟೇ ಅಲ್ಲದೆ, ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯ ಬಗ್ಗೆಯೂ ಲೇವಡಿ ಮಾಡುವ ಮೂಲಕ ನಂದಮೂರಿ ಬಾಲಕೃಷ್ಣ ವಿವಾದಕ್ಕೀಡಾಗಿದ್ದಾರೆ. ಭಾರತ ರತ್ನ ಪ್ರಶಸ್ತಿ ನನ್ನ ತಂದೆ ಎನ್​ಟಿಆರ್ ಅವರ ಕಾಲಿನ ಬೆರಳಿನ ಉಗುರಿಗೆ ಸಮಾನ. ಯಾವ ಪ್ರಶಸ್ತಿಗಳೂ ನಮ್ಮ ಕುಟುಂಬ ಟಾಲಿವುಡ್ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಮೀರಿಸಲು ಸಾಧ್ಯವಿಲ್ಲ. ನಮಗ್ಯಾರಿಗೂ ಪ್ರಶಸ್ತಿಗಳು ಬಂದಿಲ್ಲವೆಂದರೆ ಆ ಪ್ರಶಸ್ತಿಗಳೇ ಬೇಸರ ಮಾಡಿಕೊಳ್ಳಬೇಕೇ ಹೊರತು ನಾವಲ್ಲ ಎಂದು ಹೇಳಿದ್ದಾರೆ.

ಬಾಲಕೃಷ್ಣ ಹೇಳಿಕೆಯಿಂದ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಗೆ ಗುರಿಯಾಗುತ್ತಿದ್ದಾರೆ, ಎಆರ್ ರೆಹಮಾನ್ ಅಭಿಮಾನಿಗಳು ಹ್ಯಾಶ್ ಟಾಗ್ ಬಳಸಿWhoIsBalakrishna ಎಂದು ಟ್ರೋಲ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com