ಕನ್ನಡ ಚಲನಚಿತ್ರ ಕಾರ್ಮಿಕರಿಗೆ ನಟ ಶಿವರಾಜ್ ಕುಮಾರ್ 10 ಲಕ್ಷ ರೂ. ನೆರವು

ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್‌ ತಮ್ಮ ಪತ್ನಿ ಗೀತಾ ಅವರ ಹುಟ್ಟುಹಬ್ಬದ ಅಂಗವಾಗಿ ಕನ್ನಡ ಚಲನಚಿತ್ರ ಕಾರ್ಮಿಕರಿಗೆ 10 ಲಕ್ಷ ರೂ. ನೆರವು ನೀಡಿದ್ದಾರೆ.
ಗೀತಾ ಅವರಿಗೆ ಕೇಕ್ ತಿನ್ನಿಸುತ್ತಿರುವ ಶಿವರಾಜ್ ಕುಮಾರ್ (ಎಡಕ್ಕೆ)  ಸಾರಾ ಗೋವಿಂದ್ ಅವರಿಗೆ ಚೆಕ್ ಹಸ್ತಾಂತರಿಸುತ್ತಿರುವ ನಿರ್ಮಾಪಕ ಕೆ. ಪಿ. ಶ್ರೀಕಾಂತ್
ಗೀತಾ ಅವರಿಗೆ ಕೇಕ್ ತಿನ್ನಿಸುತ್ತಿರುವ ಶಿವರಾಜ್ ಕುಮಾರ್ (ಎಡಕ್ಕೆ) ಸಾರಾ ಗೋವಿಂದ್ ಅವರಿಗೆ ಚೆಕ್ ಹಸ್ತಾಂತರಿಸುತ್ತಿರುವ ನಿರ್ಮಾಪಕ ಕೆ. ಪಿ. ಶ್ರೀಕಾಂತ್
Updated on

ಬೆಂಗಳೂರು: ಕೊರೋನಾದಂತಹ ಸಂಕಷ್ಟ ಕಾಲದಲ್ಲಿ ಅನೇಕ ಸಿನಿತಾರೆಯರು ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.ಇದೀಗ ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್‌ ತಮ್ಮ ಪತ್ನಿ ಗೀತಾ ಅವರ ಹುಟ್ಟುಹಬ್ಬದ ಅಂಗವಾಗಿ ಕನ್ನಡ ಚಲನಚಿತ್ರ ಕಾರ್ಮಿಕರಿಗೆ 10 ಲಕ್ಷ ರೂ. ನೆರವು ನೀಡಿದ್ದಾರೆ.

ಶಿವರಾಜ್‌ ಕುಮಾರ್ ಅವರ ನೆರವಿನ ಚೆಕ್‌ ಅನ್ನು ಮಂಗಳವಾರ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಹಸ್ತಾಂತರಿಸಲಾಯಿತು. ನಿರ್ಮಾಪಕ ಕೆ.ಪಿ. ಶ್ರೀಕಾಂತ್‌, ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ  ಸಾ.ರಾ.ಗೋವಿಂದು ಸಮ್ಮುಖದಲ್ಲಿ ಚೆಕ್  ಹಸ್ತಾಂತರಿಸಲಾಯಿತು.

ಕೆಲ ದಿನಗಳ ಹಿಂದೆ ನಟ ಪುನೀತ್​ ರಾಜ್​ಕುಮಾರ್​ ಕೂಡ ಹತ್ತು ಲಕ್ಷ ರೂ. ಧನಸಹಾಯ ಮಾಡಿದ್ದರು. ನಟ ಯಶ್​ ಕೂಡ ಚಿತ್ರೋದ್ಯಮದ ಕಾರ್ಮಿಕರು, ತಂತ್ರಜ್ಞರಿಗೆ ತಲಾ 5 ಸಾವಿರ ರೂಪಾಯಿ ನೀಡುವ ಮೂಲಕ ಸಹಾಯ ಮಾಡಿದ್ದರು.

ನಿರ್ಮಾಪಕ ವಿಜಯ್​ ಕಿರಗಂದೂರು ಕನ್ನಡ ಚಿತ್ರರಂಗದ ಕಾರ್ಮಿಕರು, ತಂತ್ರಜ್ಞರು ಹಾಗೂ ಕಲಾವಿದರ ಒಕ್ಕೂಟದ ಸುಮಾರು 3200ಕ್ಕೂ ಅಧಿಕ ಮಂದಿಗೆ ಧನಸಹಾಯ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com