ರಾಮ್ ಚರಣ್
ರಾಮ್ ಚರಣ್

ಈಗಲೂ ಪುನೀತ್ ನಿಧನದ ಸುದ್ದಿ ನಂಬಲಾಗುತ್ತಿಲ್ಲ: ರಾಮ್ ಚರಣ್

ಟಾಲಿವುಡ್ ನಟ ರಾಮ್ ಚರಣ್ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಬೆಂಗಳೂರು: ಟಾಲಿವುಡ್ ನಟ ರಾಮ್ ಚರಣ್ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಮನೆಯವರಿಗೆ ಸಾಂತ್ವನ ಹೇಳಿ ಮಾತನಾಡಿದ ಅವರು, ‘‘ಪುನೀತ್ ರಾಜ್‌ಕುಮಾರ್ ನಿಧನ ಅತಿ ದೊಡ್ಡ ನಷ್ಟ. ನಮ್ಮ ಕುಟುಂಬದ ಸದಸ್ಯನನ್ನು ಕಳೆದುಕೊಂಡಂತಾಗಿದೆ. ಈಗಲೂ ಪುನೀತ್ ನಿಧನದ ಸುದ್ದಿ ನಂಬುವುದಕ್ಕೆ ಆಗುತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ಮನೆಗೆ ಬಂದಾಗ ತುಂಬಾ ಆತ್ಮೀಯವಾಗಿ ಇರುತ್ತಿದ್ದರು. ನಾವು ಅವರಿಗೆ ಗೆಸ್ಟ್ ಅನ್ನುವಂತೆ ನಮ್ಮ ಜತೆ ಇರುತ್ತಿದ್ದರು. ಮಾನವೀಯ ಮೌಲ್ಯಗಳನ್ನು ಪುನೀತ್​ರಿಂದ ಕಲಿಯಬೇಕು. ವಿ ಲವ್ ಯು ಪುನೀತ್ ರಾಜ್‌ಕುಮಾರ್’’ ಎಂದು ರಾಮ್ ಚರಣ್ ನುಡಿದಿದ್ಧಾರೆ.

Related Stories

No stories found.

Advertisement

X
Kannada Prabha
www.kannadaprabha.com