ಸಮಾಜ ಸೇವೆ ಮಾಡುವ ಉದಾತ್ತ ಕೆಲಸವನ್ನು ಬಿಟ್ಟು ಹೋಗಿದ್ದೀಯಾ, ಅದನ್ನು ಮುಂದುವರಿಸುವ ಶಕ್ತಿಯನ್ನು ನೀಡು: 'ಅಪ್ಪು' ನೆನೆದು ರಾಘಣ್ಣ ಭಾವುಕ ನುಡಿ

ಕನ್ನಡಿಗರ ಕಣ್ಮಣಿ, ಅಭಿಮಾನಿಗಳ ಅಪ್ಪು ಹಠಾತ್ ಕಣ್ಮರೆಯಾಗಿ ಅವರ ಕುಟುಂಬಸ್ಥರನ್ನು, ಬಂಧುಗಳು-ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗಿಸಿ ಹೋಗಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದು ಮಂಗಳವಾರಕ್ಕೆ 12 ದಿನಗಳಾಗಿದ್ದು, ಅವರ ಕುಟುಂಬಸ್ಥರು ಪರಿಸ್ಥಿತಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
ರಾಘವೇಂದ್ರ ರಾಜ್ ಕುಮಾರ್ ಹಂಚಿಕೊಂಡಿರುವ ಫೋಟೋ
ರಾಘವೇಂದ್ರ ರಾಜ್ ಕುಮಾರ್ ಹಂಚಿಕೊಂಡಿರುವ ಫೋಟೋ
Updated on

ಬೆಂಗಳೂರು: ಕನ್ನಡಿಗರ ಕಣ್ಮಣಿ, ಅಭಿಮಾನಿಗಳ ಅಪ್ಪು ಹಠಾತ್ ಕಣ್ಮರೆಯಾಗಿ ಅವರ ಕುಟುಂಬಸ್ಥರನ್ನು, ಬಂಧುಗಳು-ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗಿಸಿ ಹೋಗಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದು ಮಂಗಳವಾರಕ್ಕೆ 12 ದಿನಗಳಾಗಿದ್ದು, ಅವರ ಕುಟುಂಬಸ್ಥರು ಪರಿಸ್ಥಿತಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಪುನೀತ್ ರಾಜ್ ಕುಮಾರ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಕಳೆದ ಕೆಲವು ದಿನಗಳಿಂದ ತಮ್ಮನ ಬಗ್ಗೆ ಮನದಾಳದ ಮಾತುಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹೊರಹಾಕುತ್ತಿದ್ದಾರೆ. ಹಳೆಯ ನೆನಪುಗಳ ಫೋಟೋಗಳನ್ನು ಇಂದು ಹಂಚಿಕೊಂಡಿರುವ ಅವರು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.

ನಿರುದ್ಯೋಗಿಯಾಗಿದ್ದ ನನಗೆ ಸಮಾಜ ಸೇವೆ ಮಾಡುವ ಉದಾತ್ತ ಕೆಲಸವನ್ನು ಕೊಟ್ಟುಬಿಟ್ಟು ಹೋಗಿದ್ದೀಯಾ ಮಗನೇ, ಸೇವೆ ಮಾಡುವಾಗ ಯಾರಿಗೂ ಹೇಳದೆ ಕಿವುಡ, ಮೂಗನಂತೆ, ಕುರುಡನಂತೆ ಸಮಾಜ ಸೇವೆ ಮಾಡುತ್ತಿದ್ದೆ, ನಿನ್ನ ಈ ಉದಾತ್ತ ಕೆಲಸವನ್ನು ಮುನ್ನಡೆಸಿಕೊಂಡು ಹೋಗಲು ನನಗೆ ಶಕ್ತಿ ನೀಡು, ನಿನ್ನ ಶಾಶ್ವತ ನೆನಪುಗಳೊಂದಿಗೆ ಬದುಕುವ ಪ್ರೀತಿಯ ಶಕ್ತಿಯನ್ನು ನೀಡು ಎಂದು ರಾಘಣ್ಣ ಕೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com