ಗರುಡ ಗಮನ ವೃಷಭ ವಾಹನ ಸಿನಿಮಾಗೆ ಸಂಗೀತ ನೀಡುವುದು ಸವಾಲಾಗಿತ್ತು: ಮಿದುನ್ ಮುಕುಂದನ್
ಬೆಂಗಳೂರು: ಸಂಗೀತ ನಿರ್ದೇಶಕ ಮಿದುನ್ ಮುಕುಂದನ್ ಅವರಿಗೆ ಗರುಡ ಗಮನ ವೃಷಭ ವಾಹನ (GGVV) ಸಿನಿಮಾ 11ನೇ ಸಿನಿಮಾ. ಸಿನಿಮಾ ನಿರ್ದೇಶಿಸಿ ನಟಿಸಿರುವ ರಾಜ್ ಬಿ. ಶೆಟ್ಟಿ ಅವರ ಜೊತೆ ಈ ಹಿಂದೆ ಒಂದು ಮೊಟ್ಟೆಯ ಕಥೆ ಸಿನಿಮಾದಲ್ಲಿ ಸಂಗೀತ ನಿರ್ದೇಶನ ಮಾಡಿದ್ದರು. ಹೀಗಾಗಿ ರಾಜ್ ಬಿ. ಶೆಟ್ಟಿ ಜೊತೆ ಮಿದುನ್ ಅವರಿಗೆ ಇದು ಎರಡನೇ ಸಿನಿಮಾ.
GGVV ಸಿನಿಮಾಗೆ ಸಂಗೀತ ನೀಡುವುದು ಅತ್ಯಂತ ಸವಾಲಿನ ಕೆಲಸವಾಗಿತ್ತು ಎನ್ನುತ್ತಾರೆ ಮಿದುನ್. ಸಿನಿಮಾದ ಸಂಗೀತ ಕೆಲಸ ಪೂರ್ತಿಯಾಗಿ ಕೊರೊನಾ ಲಾಕ್ ಡೌನ್ ಸಮಯದಲ್ಲೇ ನಡೆದಿತ್ತು. ಕಷ್ಟಕರ ಸಮಯದಲ್ಲಿ ಕ್ರಿಯಾಶೀಲರಾಗಿರುವುದೇ ಅತ್ಯಂತ ಸವಾಲಾಗಿ ಪರಿಣಮಿಸಿತ್ತು. ಕೇವಲ ನನಗೆ ಅಂತಲ್ಲ ಸಿನಿಮಾಗೆ ಕೆಲಸ ಮಾಡಿರುವ ಪ್ರತಿಯೊಬ್ಬರಿಗೂ ಅದು ಕಷ್ಟಕರ ಸಮಯವಾಗಿತ್ತು.
ಸಿನಿಮಾ ಶುರುವಾಗುವುದಕ್ಕೂ ಮೊದಲು ನಿರ್ದೇಶಕ ರಾಜ್ ಬಿ. ಶೆಟ್ಟಿ ಯಾವರೀತಿ ಸಿನಿಮಾ ಬರಬೇಕು ಅಂದುಕೊಂಡಿದ್ದರೂ ಕಡೆಯವರೆಗೂ ಅದರಲ್ಲಿ ಬದಲಾವಣೆ ಮಾಡಿಕೊಳ್ಳಲಿಲ್ಲ. ಮೂಲಸ್ವರೂಪದಂತೆಯೇ ಎಲ್ಲವೂ ಬಂದಿದೆ ಎಂದು ಹರ್ಷ ವ್ಯಕ್ತಪಡಿಸುತ್ತಾರೆ ಮಿದುನ್.
GGVV ಹಿನ್ನೆಲೆ ಸಂಗೀತಕ್ಕೆ ಪ್ರೇಕ್ಷಕರು ಥಿಯೇಟರಿನಲ್ಲಿ ಯಾವರೀತಿ ಪ್ರತಿಕ್ರಿಯಿಸುತ್ತಾರೆ ಎನ್ನುವ ಕುತೂಹಲ ಮಿದುನ್ ಅವರಿಗೆ ತುಂಬಾ ಇದೆ. ಲೈಟರ್ ಬುದ್ಧ ಫಿಲಂ ಬ್ಯಾನರ್ ಅಡಿ ತಯಾರಾಗಿರುವ ಗರುಡ ಗಮನ ವೃಷಭ ವಾಹನ ಸಿನಿಮಾವನ್ನು ರಕ್ಷಿತ್ ಶೆಟ್ಟಿ ಅವರ ಪರಂವಾಹ್ ಸ್ಟುಡಿಯೋಸ್ ಪ್ರಸ್ತುತ ಪಡಿಸುತ್ತಿದೆ.
Related Article
'ಭೋಲ ಶಂಕರ್' ನಲ್ಲಿ ಮೆಗಾ ಸ್ಟಾರ್ ಜೊತೆ ಮಿಲ್ಕಿ ಬ್ಯೂಟಿ ತಮನ್ನಾ!
ಸಸ್ಪೆನ್ಸ್ ಥ್ರಿಲ್ಲರ್ 'ಜುಗಲ್ಬಂದಿ' ಯಲ್ಲಿ ಅರ್ಚನಾ ಕೊಟ್ಟಿಗೆ!
ಬಿಸಿ ಪಾಟೀಲ್ ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶನದ ಹೊಸ ಚಿತ್ರಕ್ಕೆ ಯಶಸ್ ಸೂರ್ಯ ನಾಯಕ!
ಎಆರ್ ರೆಹಮಾನ್ ಪುತ್ರಿ ಖತಿಜಾ ಅನಿಮೇಟೆಡ್ ಸಂಗೀತ ವಿಡಿಯೋ ಜಾಗತಿಕ ಪ್ರಶಸ್ತಿಗೆ ಭಾಜನ
ಅಪ್ಪು ಕಳೆದುಕೊಂಡು ಸಾಕಷ್ಟು ನೊಂದಿದ್ದೇವೆ: ನಿಮ್ಮ ಕುಟುಂಬವನ್ನು ಒಂಟಿಯಾಗಿಸಬೇಡಿ: ಅಭಿಮಾನಿಗಳಿಗೆ ಅಶ್ವಿನಿ ಮನವಿ
ನಂದಮೂರಿ ಬಾಲಕೃಷ್ಣ ಜೊತೆ ತೆಲುಗು ಸಿನಿಮಾ: ಟಾಲಿವುಡ್ ಗೆ ದುನಿಯಾ ವಿಜಯ್ ಪಾದಾರ್ಪಣೆ
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ