ಬೆಂಗಳೂರು: ಇಂದು ಬೆಳಗ್ಗೆ ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರ ಆರೋಗ್ಯ ಪರಿಸ್ಥಿತಿಯಿಂದ ಆತಂಕಿತರಾದ ರಾಜ್ಯದ ಗಣ್ಯರು ಆಸ್ಪತ್ರೆಗೆ ಧಾವಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟದ ಹಿರಿಯ ಸಚಿವರು, ಪುನೀತ್ ರಾಜ್ ಕುಮಾರ್ ಅವರ ಸಹೋದರರು, ಕುಟುಂಬ, ಕನ್ನಡ ಚಿತ್ರರಂಗದ ನಟರಾದ ಗಣೇಶ್, ಯಶ್ ಮತ್ತಿತರರು ಆಸ್ಪತ್ರೆಗೆ ಧಾವಿಸಿ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ.
ಆಸ್ಪತ್ರೆ ಮುಂದೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸುಧಾರಿಸಲು ಎಂದು ಪ್ರಾರ್ಥಿಸುತ್ತಿದ್ದಾರೆ. ಈ ಮಧ್ಯೆ ಆಸ್ಪತ್ರೆಯ ವೈದ್ಯ ರಂಗನಾಥ್ ನಾಯಕ್ ಪರಿಸ್ಥಿತಿ ಗಂಬೀರತೆ ವಿವರಿಸಿದರು.
ಈ ಸುದ್ದಿ ಕೇಳಿದ ಕೂಡಲೇ ರಾಜ್ಯದ್ಯಂತ ಕೂಡ ಸಿಡಿಲು ಬಡಿದ ಪರಿಸ್ಥಿತಿ ಉಂಟಾಗಿದೆ. ಅಭಿಮಾನಿಗಳು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.
Advertisement
Advertisement