ಚೆನ್ನೈ: ರಜನಿಕಾಂತ್‌ ಆಸ್ಪತ್ರೆಗೆ ದಾಖಲು

ತಮಿಳು ಚಿತ್ರ ರಂಗದ ಸೂಪರ್‌ ಸ್ಟಾರ್‌  ರಜನಿಕಾಂತ್  ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ  ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು  ಹೇಳಿವೆ.
ರಜನಿಕಾಂತ್
ರಜನಿಕಾಂತ್
Updated on

ಚೆನ್ನೈ: ತಮಿಳು ಚಿತ್ರ ರಂಗದ ಸೂಪರ್‌ ಸ್ಟಾರ್‌  ರಜನಿಕಾಂತ್  ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ  ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು  ಹೇಳಿವೆ.

2020ರಲ್ಲಿ, ರಜನಿಕಾಂತ್​  ಅವರಿಗೆ ಅನಾರೋಗ್ಯ ಉಂಟಾಗಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಇದಾದ ಕೆಲವು ದಿನಗಳ ನಂತರ, ಅವರು 2021ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಪ್ರಾರಂಭಿಸಲು ಯೋಜಿಸಿದ್ದ ರಾಜಕೀಯ ಪಕ್ಷ  ಆರಂಭಿಸುವುದಿಲ್ಲ ಎಂದು ಅವರು ಘೋಷಿಸಿದ್ದರು.

ಮೊನ್ನೆಯಷ್ಟೆ ದೆಹಲಿಯಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ರಜನಿಕಾಂತ್‌ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ  ಸ್ವೀಕರಿಸಿದ್ದರು. ಪ್ರಶಸ್ತಿ ಪಡೆಯಲು ದೆಹಲಿಗೆ ತೆರಳಿದ್ದ ಅವರು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಜನ್ಯಪೂರ್ವಕವಾಗಿ ಭೇಟಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com