ಕೆಜಿಎಫ್ ನಿರ್ಮಿಸಿದ ಹೊಂಬಾಳೆ ಫಿಲ್ಮ್ಸನಿಂದ ಜಗ್ಗೇಶ್ ಸಿನಿಮಾ: ಸಂತೋಷ್ ಆನಂದ್ ರಾಮ್ ನಿರ್ದೇಶನ

ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಅವರು ತಮ್ಮ ಬ್ಯಾನರ್ ನ 12ನೇ ಚಿತ್ರವನ್ನು ಇಂದು ಘೋಷಣೆ ಮಾಡಿದ್ದು, ಚಿತ್ರಕ್ಕೆ ರಾಘವೇಂದ್ರ ಸ್ಟೋರ್ಸ್ ಎಂದು ಹೆಸರಿಟ್ಟಿದರೆ. ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನವಿದ್ದು ಜಗ್ಗೇಶ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. 
ಜಗ್ಗೇಶ್-ಸಂತೋಷ್ ಆನಂದರಾಮ್
ಜಗ್ಗೇಶ್-ಸಂತೋಷ್ ಆನಂದರಾಮ್
Updated on

ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಅವರು ತಮ್ಮ ಬ್ಯಾನರ್ ನ 12ನೇ ಚಿತ್ರವನ್ನು ಇಂದು ಘೋಷಣೆ ಮಾಡಿದ್ದು, ಚಿತ್ರಕ್ಕೆ ರಾಘವೇಂದ್ರ ಸ್ಟೋರ್ಸ್ ಎಂದು ಹೆಸರಿಟ್ಟಿದರೆ. ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನವಿದ್ದು ಜಗ್ಗೇಶ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. 

ಈ ಸಿನಿಮಾ ಫಸ್ಟ್ ಲುಕ್ ಅನ್ನು ಹೊಂಬಾಳೆ ಫಿಲ್ಮ್ಸ್ ಕೂ ವೇದಿಕೆಯಲ್ಲಿ ಹಂಚಿಕೊಂಡಿದೆ. ಫಸ್ಟ್ ಲುಕ್ ಪೋಸ್ಟರ್ ಗಮನಿಸಿದರೆ ಇದೊಂದು ಹೋಟೆಲ್ ಕುರಿತಾದ ಕಥೆ ಎಂದು ಮೇಲುನೋಟಕ್ಕೆ ಗೊತ್ತಾಗುತ್ತಿದೆ. 

ಸಾಲು ಸಾಲು ಚಿತ್ರ ಘೋಷಿಸಿರುವ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ಮೊದಲ ಚಿತ್ರ ‘ನಿನ್ನಿಂದಲೇ’. 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ‘ನಿನ್ನಿಂದಲೇ’ ಚಿತ್ರ ತೆರೆಗೆ ಬಂದಿತ್ತು. ಬಳಿಕ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಮಾಸ್ಟರ್‌ ಪೀಸ್’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿತ್ತು. 

2017ರಲ್ಲಿ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ‘ರಾಜಕುಮಾರ’ ಚಿತ್ರ ಸೂಪರ್ ಡ್ಯೂಪರ್ ಹಿಟ್ ಆಯ್ತು. ಕನ್ನಡ ಚಿತ್ರರಂಗದಲ್ಲೇ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರಗಳ ಪೈಕಿ ‘ರಾಜಕುಮಾರ’ ಚಿತ್ರವೂ ಒಂದು ಎನಿಸಿಕೊಂಡಿತು.

ನಂತರ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಕೆಜಿಎಫ್ ಚಿತ್ರ ಕನ್ನಡ ಚಿತ್ರರಂಗದಲ್ಲೇ ಸಾರ್ವಕಾಲಿಕ ದಾಖಲೆ ಬರೆಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com