ನಟ, ನಿರ್ದೇಶಕ ಹಾಗೂ ನಿರೂಪಕ ಕಿಚ್ಚ ಸುದೀಪ್ ಅನಾರೋಗ್ಯಕ್ಕೀಡಾಗಿದ್ದು, ಸ್ವತಃ ಅವರೇ ಈ ಕುರಿತು ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರಾದರೂ, ನಿಖರವಾಗಿ ಏನಾಗಿದೆ ಎಂಬುದರ ಬಗ್ಗೆ ತಿಳಿಸಿಲ್ಲ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿರುವುದಾಗಿ ಹೇಳಿದ್ದಾರೆ.
ಹುಷಾರಿಲ್ಲ, ಈ ವೀಕೆಂಡ್ನೊಳಗೆ ಚೇತರಿಸಿಕೊಳ್ಳುತ್ತೇನೆ ಎಂದು ಕೊಂಡಿದ್ದೆ. ಆದರೆ ನನ್ನ ವೈದ್ಯರ ಸಲಹೆ ಪ್ರಕಾರ ಇನ್ನೂ ಒಂದು ವಾರ ವಿಶ್ರಾಂತಿ ತೆಗೆದು ಕೊಳ್ಳಬೇಕಿದೆ. ಈ ಕಾರಣಕ್ಕೆ ಬಿಗ್ ಬಾಸ್ ಈ ವಾರ ಎಪಿಸೋಡ್ನಲ್ಲಿ ನಾನಿರುವುದಿಲ್ಲ. ಬಿಗ್ ಬಾಸ್ ಕ್ರಿಯೇಟಿವ್ ತಂಡ ಈ ವಾರದ ಎಲಿಮಿನೇಷನ್ಗೆ ಏನು ಪ್ಲಾನ್ ಮಾಡಿದೆ ಎಂಬ ಬಗ್ಗೆ ನನಗೆ ಕುತೂಹಲವಿದೆ ಎಂದು ತಿಳಿಸಿದ್ದಾರೆ.
Advertisement