ಕನ್ನಡದ 'ಕೋಟಿ' ನಿರ್ಮಾಪಕ ರಾಮು ಪಂಚಭೂತಗಳಲ್ಲಿ ಲೀನ!

ಕರ್ನಾಟಕದ ಕೋಟಿ ನಿರ್ಮಾಪಕ ಎಂದೇ ಪ್ರಖ್ಯಾತರಾಗಿದ್ದ ರಾಮು ಅವರು ಕೊರೋನಾಗೆ ಬಲಿಯಾಗಿದ್ದು ಇಂದು ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಿತು.
ರಾಮು ಅಂತ್ಯಕ್ರಿಯೆ
ರಾಮು ಅಂತ್ಯಕ್ರಿಯೆ

ತುಮಕೂರು: ಕರ್ನಾಟಕದ ಕೋಟಿ ನಿರ್ಮಾಪಕ ಎಂದೇ ಪ್ರಖ್ಯಾತರಾಗಿದ್ದ ರಾಮು ಅವರು ಕೊರೋನಾಗೆ ಬಲಿಯಾಗಿದ್ದು ಇಂದು ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಿತು. 

ಮೂರು ದಿನಗಳ ಹಿಂದೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮು ಅವರು ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. 

ಇಂದು ಕೊರೋನಾ ನಿಯಮಾವಳಿ ಅನುಸಾರ ತುಮಕೂರಿನ ಸ್ವಗ್ರಾಮ ಕೊಡಿಗೆಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು. ಪುತ್ರ ಆರ್ಯನ್ ಅಂತ್ಯ ಸಂಸ್ಕಾರದ ವಿಧಿಗಳನ್ನು ನೆರವೇರಿಸಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

52 ವರ್ಷದ ರಾಮು ಅವರಿಗೆ ಒಂದು ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು. ರಾಮು ಅವರು ಪತ್ನಿ ಮಾಲಾಶ್ರೀ, ಮಗ ಮತ್ತು ಮಗಳನ್ನು ಅಗಲಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ 39 ಚಿತ್ರಗಳನ್ನು ನಿರ್ಮಿಸಿದ್ದಾರೆ. ಗೋಲಿಬಾರ್ ಚಿತ್ರದ ನಿರ್ಮಾಣದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಮೊದಲಿಗೆ ಕನ್ನಡದಲ್ಲಿ ಕೋಟಿ ಬಜೆಟ್ ನಲ್ಲಿ ಚಿತ್ರ ನಿರ್ಮಿಸಿದ್ದರಿಂದ ಅವರಿಗೆ ಕೋಟಿ ರಾಮು ಎಂದು ಹೆಸರು ಬಂದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com