ಅಣ್ಣಯ್ಯ, ರನ್ನ ಸಿನಿಮಾ ನಿರ್ಮಾಪಕ ಎಂ. ಚಂದ್ರಶೇಖರ್ ಇನ್ನಿಲ್ಲ

ಸುದೀಪ್ ನಟನೆಯ 'ರನ್ನ' ಮತ್ತು ರವಿಚಂದ್ರನ್ ನಟನೆಯ ಅಣ್ಣಯ್ಯ ಸಿನಿಮಾ ಖ್ಯಾತಿಯ ನಿರ್ಮಾಪಕ ಎಂ. ಚಂದ್ರಶೇಖರ್ ಕೊರೊನಾಗೆ ಬಲಿಯಾಗಿದ್ದಾರೆ.
ಎಂ.ಚಂದ್ರಶೇಖರ್
ಎಂ.ಚಂದ್ರಶೇಖರ್

ಸುದೀಪ್ ನಟನೆಯ 'ರನ್ನ' ಮತ್ತು ರವಿಚಂದ್ರನ್ ನಟನೆಯ ಅಣ್ಣಯ್ಯ ಸಿನಿಮಾ ಖ್ಯಾತಿಯ ನಿರ್ಮಾಪಕ ಎಂ. ಚಂದ್ರಶೇಖರ್ ಕೊರೊನಾಗೆ ಬಲಿಯಾಗಿದ್ದಾರೆ.

ನಿಮಿಷಾಂಬ ಪ್ರೊಡಕ್ಷನ್ ನ ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್ ನ ಅನ್ನದಾತನನ್ನು ಕೊರೊನಾ ಬಲಿ ಪಡೆದಿದೆ. 

ಕಳೆದ 23 ದಿನಗಳ ಹಿಂದೆ ಚಂದ್ರಶೇಖರ್ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ನಂತರ ಮಣಿಪಾಲ್ ಸೆಂಟರ್ ಗೆ ದಾಖಲಾಗಿದ್ದರು. ಬಳಿಕ ಕೋವಿಡ್ ನಿಂದ ಗುಣಮುಖರಾಗಿದ್ದಾದರೂ ಶ್ವಾಸಕೋಶ ಸಮಸ್ಯೆ ಉಲ್ಬಣಗೊಂಡು ಇಂದು (ಏಪ್ರಿಲ್ 29) ಕೊನೆಯುಸಿರೆಳೆದಿದ್ದಾರೆ.

ನಿರ್ಮಾಪಕ ಚಂದ್ರಶೇಖರ್ ಇತ್ತೀಚಿಗಷ್ಟೆ ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನದ ಉಪೇಂದ್ರ ನಟನೆಯ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com