ಕೇವಲ ಪ್ರಚಾರಕ್ಕಾಗಿ ಬಂದ್ ಮಾಡಿದರೆ ನಮ್ಮ ಬೆಂಬಲವಿಲ್ಲ: ನಟ ನಿಖಿಲ್ ಕುಮಾರಸ್ವಾಮಿ

ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಿದರೆ ನಮ್ಮ ಬೆಂಬಲವಿರುವುದಿಲ್ಲ ಎಂದು ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.
ನಟ ನಿಖಿಲ್ ಕುಮಾರಸ್ವಾಮಿ
ನಟ ನಿಖಿಲ್ ಕುಮಾರಸ್ವಾಮಿ

ರಾಮನಗರ: ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಿದರೆ ನಮ್ಮ ಬೆಂಬಲವಿರುವುದಿಲ್ಲ ಎಂದು ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ಅಭಿನಯಿಸಿರುವ ರೈಡರ್ ಸಿನಿಮಾ ರಾಜ್ಯಾದ್ಯಂತ ಡಿಸೆಂಬರ್ 22ರಂದು ಬಿಡುಗಡೆಗೊಂಡಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇಂದು ಈ ಸಿನಿಮಾದ ಪ್ರಮೋಷನ್‍ಗಾಗಿ ರಾಮನಗರದ ಶಾನ್ ಚಿತ್ರಮಂದಿರಕ್ಕೆ ನಿಖಿಲ್ ಭೇಟಿ ನೀಡಿದ್ದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 31 ನೇ ತಾರೀಖು ಕರ್ನಾಟಕ ಬಂದ್ ಕರೆ ನೀಡಿರುವುದರಿಂದ ನಮ್ಮ ಚಿತ್ರರಂಗಕ್ಕೆ ಬಹಳ ದೊಡ್ಡ ಹೊಡೆತ ಬೀಳಲಿದೆ. 31ನೇ ದಿನಾಂಕ ಹಲವು ಕನ್ನಡ ಸಿನಿಮಾಗಳು ಬಿಡುಗಡೆ ಆಗಲಿದ್ದು, ಆ ಸಿನಿಮಾಗಳಿಗೆ ಹೊಡೆತ ಬೀಳಲಿದೆ. ನಮಗೆ ಮೊದಲ 3 ದಿನದ ಕಲೆಕ್ಷನ್ ಬಹಳ ಮುಖ್ಯ. ಆದರೆ ಆ ದಿನವೇ ಬಂದ್ ಮಾಡಿದರೆ ತೊಂದರೆಯಾಗುತ್ತದೆ. ಸಾರ್ವಜನಿಕರಿಗೆ ಸಹಾಯವಾಗುತ್ತದೆ ಎಂದರೆ  ಬಂದ್ ಮಾಡಲಿ. ಆದರೆ ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಬಾರದು. ಆ ರೀತಿಯ ಬಂದ್‍ಗೆ ಯಾವುದೇ ಕಾರಣಕ್ಕೂ ನಾವು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com